ಸಿದ್ದರಾಮಯ್ಯ ವಿರುದ್ಧ ಟ್ವೀಟರ್ ನಲ್ಲಿ ಕಿಡಿಕಾರಿದ ಕುಮಾರಸ್ವಾಮಿ

Webdunia
ಶುಕ್ರವಾರ, 25 ಅಕ್ಟೋಬರ್ 2019 (07:28 IST)
ಬೆಂಗಳೂರು : ಉಪಚುನಾವಣೆ ಕಾಂಗ್ರೆಸ್ 15 ಸೀಟು ಗೆದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದ ಸಿದ್ದರಾಮಯ್ಯ ನವರ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.



ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು?ಪ್ರಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸಿದಿದ್ದು ಯಾರು?ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ಎಂದು ಎಂದು ಪ್ರಶ್ನಿಸಿದ್ದಾರೆ.

 

ಹಾಗೇ ಮತ್ತೊಂದು ಟ್ವೀಟ್ ಮಾಡಿ, ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ ಯಾರು ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ