Webdunia - Bharat's app for daily news and videos

Install App

ಕುಮಾರಸ್ವಾಮಿ ವಿರುದ್ಧ ಸುಮಲತಾ ಕಿಡಿ

Webdunia
ಶುಕ್ರವಾರ, 21 ಏಪ್ರಿಲ್ 2023 (12:58 IST)
ಮಂಡ್ಯ : ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

ನಮ್ಮ ಕುಟುಂಬ ಸುಮಲತಾ ಅವರಿಗೆ ಏನು ಅನ್ಯಾಯ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಚುನಾವಣೆಯಲ್ಲಿ ಒಬ್ಬರ ವಿರುದ್ಧವಾಗಿ ಸ್ಫರ್ಧೆ ಮಾಡಿದರೆ ಅದು ದ್ವೇಷ ಎಂದು ಅರ್ಥನಾ? ಚುನಾವಣೆ ಎಂದಮೇಲೆ ಅದು ಸ್ಪರ್ಧೆ. ಅದರಲ್ಲಿ ನಿಮಗೂ ಹಕ್ಕಿದೆ, ನನಗೂ ಹಕ್ಕಿದೆ ಎಂದರು. 

ಚುನಾವಣೆ ಅಂದಮೇಲೆ ಅವರ ಮಗನೇ ಆಗಲಿ, ಅವರೇ ಆಗಲಿ ಅಥವಾ ಅವರ ಶ್ರೀಮತಿಯೇ ಆಗಲಿ ಯಾರೇ ಬಂದರೂ ವಿರೋಧ ಮಾಡುವವರು ಇದ್ದೇ ಇರುತ್ತಾರೆ. ಇಲ್ಲಿಯವರೆಗೆ ಏನಾಗಿದೆ ಎಂದರೆ ರಾಜಕಾರಣದಲ್ಲಿ ಯಾವ ಅಭ್ಯರ್ಥಿಗಳೂ ಅವರನ್ನು ಎದುರಿಸಿ ನಿಲ್ಲುತ್ತಿರಲಿಲ್ಲ. ಈಗ ಅದು ಆಗುತ್ತಿದೆ ಎಂಬ ವಿಷಯವನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹರಿಹಾಯ್ದರು. 

ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ ಅವರಿಗೆ 20 ವರ್ಷಗಳಿಂದ ಜೆಡಿಎಸ್ ಪಕ್ಷದಿಂದ ಅನ್ಯಾಯವಾಗುತ್ತಾ ಬಂದಿದೆ. ಎಸ್.ಡಿ ಜಯರಾಮ್ ಅಂತಹ ನಾಯಕರು ಜೆಡಿಎಸ್ ಪಕ್ಷವನ್ನು ಬೆಳೆಸಿದಂತಹ ನಾಯಕರು. ಅವರ ಕುಟುಂಬಕ್ಕೆ ಮೊದಲಿನಿಂದಲೂ ಅನ್ಯಾಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments