ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೆ ಟ್ವೀಟ್​ ವಾರ್

Webdunia
ಶನಿವಾರ, 18 ನವೆಂಬರ್ 2023 (14:01 IST)
ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆ ಅವರೊಂದಿಗೆ ನಡೆಸಿದ ಫೋನ್​ ಕಾಲ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆ ವಿಡಿಯೋ ವೈರಲ್​ ಆಗುತ್ತಿದ್ದಂತೆ, ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಗಿಬಿದ್ದಿದ್ದು, ವರ್ಗಾವಣೆ ದಂಧೆಗೆ ಈ ವಿಡಿಯೋನೆ ಸಾಕ್ಷಿ ಎಂಬಂತೆ ಆರೋಪ ಮಾಡಿದವು.

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವೈಎಸ್​ಟಿ ಟ್ಯಾಕ್ಸ್​ ಅಂತ ಆರೋಪಿಸಿದ್ದರು. ಇದೀಗ ಸಂಭಾಷಣೆಯಲ್ಲಿ ಕೇಳಿಬಂದ ವಿವೇಕಾನಂದ ಎಂಬ ಹೆಸರಿನ ವ್ಯಕ್ತಿ ಯಾರು ಎಂಬುವುದನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಪತ್ತೆ ಹಚ್ಚಿದ್ದು, ಸರಣಿ ಟ್ವೀಟ್​ ಮೂಲಕ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು ಸರಕಾರ! ವಿಸ್ಮಯಗಳ ಆಗರ!! ಡೂಪ್ಲಿಕೇಟ್‌ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್​ಆರ್​ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ” ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಮುಂದಿನ ಸುದ್ದಿ
Show comments