Webdunia - Bharat's app for daily news and videos

Install App

ಸಿದ್ದರಾಮಯ್ಯರಿಗೆ 'ಹುಲಿ' ಹೆಸರು ಬಂದಿರುವುದರ ಬಗ್ಗೆ ಕಾರಣ ಬಿಚ್ಚಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Sampriya
ಗುರುವಾರ, 15 ಆಗಸ್ಟ್ 2024 (16:16 IST)
ಬೆಂಗಳೂರು: ಇಂದು ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ಮುಖ್ಯಮಂತ್ರಿಗಳ ಸುರಕ್ಷತೆ ದೃಷ್ಟಿಯಿಂದ ಹಾಕಲಾಗಿದ್ದ ಬುಲೆಟ್‌ ಪ್ರೂಫ್ ಗ್ಲಾಸ್‌ ಅನ್ನು ತೆಗೆಸಿ ಸಿಎಂ ಸಿದ್ದರಾಮಯ್ಯ ಎಲ್ಲರ ಗಮನ ಸೆಳೆದರು. ಭಾಷಣಕ್ಕೂ ಮುನ್ನಾ ಪೊಲೀಸರ ಬಳಿ ನನಗೆ ಬುಲೆಟ್ ಪ್ರೂಫ್ ಬೇಡ ಮೊದಲು ತೆಗಿರಪ್ಪ ಎಂದು ಹೇಳಿದರು. ಅದರಂತೆ ಪೋಡಿಯಂಗೆ ಹಾಕಿದ್ದ ಬುಲೆಟ್ ಪ್ರೂಫ್ ಗ್ಲಾಸ್‌ ಅನ್ನು ತೆಗೆದು ಹಾಕಿದರು. ಇದಾದ ಬಳಿಕ ಯಾವುದೇ ರಕ್ಷಾಕವಚ ಇಲ್ಲದ ಪೋಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಬುಲೆಟ್ ಪ್ರೂಫ್ ಗ್ಲಾಸ್ ತೆಗೆದು ಭಾಷಣ ಮಾಡಿದ್ದಕ್ಕೆ ಪಕ್ಷದ ನಾಯಕರು ಅವರನ್ನು ಕೊಂಡಾಡಿದ್ದಾರೆ.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ನಮ್ಮ ರಾಜ್ಯ ಶಾಂತಿ ಪ್ರಿಯವಾಗಿದ್ದು, ಇಲ್ಲಿನ ಬುಲೆಟ್ ಪ್ರೂಫ್ ಬೇಕಾಗಿಲ್ಲ. ನಮ್ಮ ಸಿದ್ದರಾಮಯ್ಯನವರು ಯಾವತ್ತೂ ದೈರ್ಯವಂತರು. ಅದರಲ್ಲಿ ಎರಡು ಮಾತಿಲ್ಲ. ಸಿದ್ದರಾಮಯ್ಯನವರಿಗೆ ಹುಲಿ ಎಂದು ಹೆಸರು ಬಂದಿರುವುದೇ ಈ ಕಾರಣಗಳಿಗೆ ಎಂದು ಕೊಂಡಾಡಿದರು. ‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments