Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಟ್ವಿಸ್ಟ್: ಅಪಘಾತದ ಹಿಂದಿದೆ ಸೀಕ್ರೆಟ್

Krishnaveni K
ಗುರುವಾರ, 16 ಜನವರಿ 2025 (10:07 IST)
ಬೆಳಗಾವಿ: ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಘಟನೆಗೆ ಈಗ ಟ್ವಿಸ್ಟ್ ಸಿಕ್ಕಿದೆ. ಸಚಿವೆಯ ಕಾರು ಅಪಘಾತದ ಕಾರಣವೇ ಬೇರೆ ಎಂಬುದು ಈಗ ಬಯಲಾಗಿದೆ.

ಸಂಕ್ರಾಂತಿ ದಿನದಂದು ಬೆಳ್ಳಂ ಬೆಳಿಗ್ಗೆ ತಮ್ಮ ಸಹೋದರನ ಜೊತೆ ಬೆಳಗಾವಿ ನಿವಾಸಕ್ಕೆ ತೆರಳುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದ ಕಾರು ಮರಕ್ಕೆ ಢಿಕ್ಕಿಯಾಗಿ ಸಚಿವೆ ಗಾಯಗೊಂಡಿದ್ದರು. ಸದ್ಯಕ್ಕೆ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಚಿವೆಯ ಕಾರಿಗೆ ಎರಡು ನಾಯಿಗಳು ಅಡ್ಡಬಂದಿದ್ದರಿಂದ ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಮರಕ್ಕೆ ಢಿಕ್ಕಿಯಾಯಿತು ಎಂದು ಸಚಿವರ ಸಹೋದರ ಎಂಎಲ್ ಸಿ ಚನ್ನರಾಜು ಹೇಳಿಕೆ ನೀಡಿದ್ದರು.

ಆದರೆ ಈಗ ಪೊಲೀಸರು ಕಾರು ಚಾಲಕನ ವಿಚಾರಣೆ ನಡೆಸಿದ್ದು ಅಪಘಾತದ ಹಿಂದಿನ ಕಾರಣದ ರಹಸ್ಯ ಬಯಲಾಗಿದೆ. ಸಚಿವೆಯ ಕಾರಿಗೆ ನಾಯಿಗಳಲ್ಲ. ಟ್ಯಾಂಕರ್ ನಿಂದ ತಪ್ಪಿಸಿಕೊಳ್ಳಲು ಹೋಗಿ ಢಿಕ್ಕಿಯಾಗಿದೆ ಎನ್ನಲಾಗುತ್ತಿದೆ.

ಪೊಲೀಸರ ಮುಂದೆ ಹೇಳಿಕೆ ನೀಡಿರುವ ಚಾಲಕ ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ನಿಂದ ತಪ್ಪಿಸಿಕೊಳ್ಳಲು ಹೋಗಿ ಪಕ್ಕದಲ್ಲಿದ್ದ ಸರ್ವಿಸ್ ರಸ್ತೆಗೆ ಕಾರು ನುಗ್ಗಿತು. ಬಳಿಕ ಮರಕ್ಕೆ ಢಿಕ್ಕಿಯಾಯಿತು ಎಂದು ಹೇಳಿಕೆ ನೀಡಿದ್ದಾರೆ. ಢಿಕ್ಕಿಯಾಗಲಿದ್ದು ಟ್ಯಾಂಕರ್ ಡ್ರೈವರ್ ಒಮ್ಮೆ ನಿಂತು ನೋಡಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಹೀಗಾಗಿ ಈಗ ಟ್ಯಾಂಕರ್ ಮಾಲಿಕನಿಗಾಗಿ ಹುಡುಕಾಟ ನಡೆದಿದೆ. ಪೊಲೀಸರು ಹಿಟ್ ಆಂಡ್ ರನ್ ಕೇಸ್ ದಾಖಲಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments