Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಹದಾಯಿ ಯೋಜನೆಯ ಜಾರಿ ಕುರಿತು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.
ಯೋಜನೆ ಜಾರಿಗೆ ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಅಡ್ಡಿ ಆತಂಕವಿಲ್ಲದೆ ಯೋಜನೆ ಜಾರಿಗೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದಿದ್ದಾರೆ.
ಖಾಸಗಿ ಆಸ್ಪತ್ರೆಯಿಂದ ಕೋವಿಡ್ -19 ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಡಿಕೆಶಿ ವಿರೋಧ ವ್ಯಕ್ತಪಡಿಸುವ ಬದಲು, ರಾಜ್ಯ ಸರಕಾರಕ್ಕೆ ಸಹಕಾರ ನೀಡಲಿ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರು ಸರಕಾರಕ್ಕೆ ಸಲಹೆ-ಸೂಚನೆ ನೀಡಲಿ ಎಂದಿದ್ದಾರೆ.