Publish Date: Fri, 08 May 2020 (10:56 IST)
Updated Date: Fri, 08 May 2020 (10:57 IST)
ಮಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ತವರೂರಿಗೆ ತೆರಳಲಾಗದೆ ಮಂಗಳೂರಿನಲ್ಲಿ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊರೊನಾ ನಿಯಂತ್ರಿಸಲು ಇಡೀ ದೇಶದ ಲಾಕ್ ಡೌನ್ ಮಾಡಿದ ಕಾರಣ ವಲಸೆ ಕಾರ್ಮಿಕರು ತಮ್ಮ ಊರಿಗೆ ತೆರಳು ಸಾಧ್ಯವಾಗದೆ, ಆಹಾರವಿಲ್ಲದೆ ಕಂಗೆಟ್ಟದ್ದಾರೆ.ಇದರಿಂದ ರೊಚ್ಚಿಗೆದ್ದ ಸಾವಿರಾರು ವಲಸೆ ಕಾರ್ಮಿಕರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿ ನಮ್ಮನ್ನ ಊರಿಗೆ ಕಳಿಸಿ ಎಂದು ಗಲಾಟೆ ಮಾಡುತ್ತಿದ್ದಾರೆ.
ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಮಿಕರ ಮನವೊಲಿಸಲು ಪ್ರಯತ್ನಿಸಿದ್ದು, ಪೊಲೀಸರ ಜೊತೆ ಕಾರ್ಮಿಕರು ವಾಗ್ವಾದ ನಡೆಸುತ್ತಿದ್ದಾರೆ ಎನ್ನಲಾಗಿದೆ.