ಲಾಕ್ ಡೌನ್ ಇದ್ರೂ ಜಾತ್ರೆ : 20 ಮುಖಂಡರು, 200 ಭಕ್ತರ ಮೇಲೆ ಕೇಸ್

Webdunia
ಶುಕ್ರವಾರ, 17 ಏಪ್ರಿಲ್ 2020 (20:03 IST)
ಲಾಕ್‍ಡೌನ್ ಉಲ್ಲಂಘಿಸಿ ಜಾತ್ರೆ ನಡೆಸಿದ್ದರಿಂದಾಗಿ ದೇವಾಲಯ ಆಡಳಿತ ಮಂಡಳಿಯ 20 ಮಂದಿ ಹಾಗೂ 200 ಭಕ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವರ ದೇವಸ್ಥಾನದ ಮಠದ ಜಾತ್ರಾ ಮಹೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಮಠದ 20 ಜನ ಹಾಗೂ 150 ರಿಂದ 200 ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕೊರೋನಾ ಹರಡದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಈಗಾಗಲೇ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ಕಲಂ ಜಾರಿಯಲ್ಲಿದ್ದು, ಯಾವುದೇ ರೀತಿಯ ಜನ ಸಮೂಹ ಹಾಗೂ ಜಾತ್ರೆ ನಡೆಸುವುದನ್ನು ನಿಷೇಧಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಾತ್ರೆಯನ್ನು ರದ್ದುಗೊಳಿಸುವುದಾಗಿ ಲಿಖಿತವಾಗಿ ಹೇಳಿಕೆ ನೀಡಿ ತದನಂತರ ಜನಸಮೂಹವನ್ನು ಸೇರಿಸಿ ಜಾತ್ರೆ ಆಯೋಜಿಸಿದ್ದು, ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿದಂತಾಗಿದೆ.

ಇದೇ ಪ್ರಕರಣ ಸಂಬಂಧ ಜಾತ್ರೆಯನ್ನು ತಡೆಯುವಲ್ಲಿ ವಿಫಲರಾಗಿ ಕರ್ತವ್ಯ ಲೋಪವೆಸಗಿದ ಚಿತ್ತಾಪುರ ಗ್ರಾಮೀಣ ಹೋಬಳಿಯ ಸೆಕ್ಟ್ರಲ್ ಮೆಜಿಸ್ಟ್ರೇಟ್ ಆಗಿ ನೇಮಕ ಮಾಡಲಾದ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜಕುಮಾರ ರಾಠೋಡ ಹಾಗೂ ವಾಡಿ ಪೊಲೀಸ್ ಠಾಣೆಯ ಪಿ.ಎಸ್.ಐ. ವಿಜಯಕುಮಾರ ಅವರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments