ಬಿಡಿಎ ಮೇಲೆ ಲೋಕಾಯುಕ್ತ ದಾಳಿ !

Webdunia
ಭಾನುವಾರ, 12 ಫೆಬ್ರವರಿ 2023 (12:59 IST)
ಬೆಂಗಳೂರು : ಎಸಿಬಿ ರದ್ದುಗೊಳಿಸಿ ಲೋಕಾಯುಕ್ತಕ್ಕೆ ಮರುಜೀವ ಬಂದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ದಾಳಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೈಗೊಂಡಿದ್ದಾರೆ.

ಮೊದಲ ದಾಳಿಯಲ್ಲೇ ಬಿಡಿಎ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು, ಬಿಸಿ ಮುಟ್ಟಿಸಿದ್ದಾರೆ. ಬಿಡಿಎನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಅವ್ಯವಹಾರಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3:30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳು ಕುಮಾರ ಪಾರ್ಕ್ ಬಳಿಯ ಬಿಡಿಎ ಕೇಂದ್ರ ಕಚೇರಿಗೆ ಲಗ್ಗೆ ಇಟ್ಟಿದ್ದರು.

ಸುಮಾರು 35 ಅಧಿಕಾರಿಗಳ 6 ತಂಡಗಳು ದಾಳಿ ನಡೆಸಿ ಟೌನ್ ಪ್ಲಾನಿಂಗ್, ಅಲಾಟ್ಮೆಂಟ್ ಸೆಕ್ಷನ್ ಮತ್ತು ಪರಿಹಾರ ವಿತರಣೆ ಸೆಕ್ಷನ್ಗಳಲ್ಲಿ ಕಂಡು ಬಂದ ಅಕ್ರಮ ಅವ್ಯವಹಾರಗಳ ಬಗ್ಗೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರೆಬೆತ್ತಲೆ ಪ್ರತಿಭಟನೆ ಇಂಡಿ ಒಕ್ಕೂಟದಲ್ಲೇ ಅಸಮಾಧಾನವಿದ್ದರೂ ದೇಶಕ್ಕಾಗಿ ಈ ಪ್ರತಿಭಟನೆ ಎಂದು ಸಮರ್ಥಿಸಿದ ಖರ್ಗೆ

ಸಂಜೆ ಹೊತ್ತು ಯಾಕೆ ಉಗುರು ಕಟ್ ಮಾಡಬಾರದು ಗೊತ್ತಾ, ಅಸಲಿ ಕಾರಣ ಇಲ್ಲಿದೆ

ಯಮಸ್ವರೂಪಿ ಹಿಮಪಾತಕ್ಕೆ ಬೆಚ್ಚಿದ ಅಮೆರಿಕ: ತುರ್ತು ಪರಿಸ್ಥಿತಿ ಘೋಷಣೆ, ‌ಜನಜೀವನ ಅಸ್ತವ್ಯಸ್ತ

ವಿಧಾನಸಭೆ ಚುನಾವಣೆಗೆ ಮುನ್ನ ಅಚ್ಚರಿಯ ನಿರ್ಧಾರ ಕೈಗೊಂಡ ಕೇರಳ ಸಿಎಂ ಪಿಣರಾಯಿ ವಿಜಯನ್‌

ಶರ್ಟ್ ರಹಿತ ಪ್ರತಿಭಟನೆ ವೇಳೆ ಕಾಂಗ್ರೆಸ್ ಯುವ ಮುಖಂಡನಿಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments