Publish Date: Thu, 30 Aug 2018 (17:48 IST)
Updated Date: Thu, 30 Aug 2018 (17:51 IST)
ಕೆಆರ್ ಎಸ್ ಜಲಾಶಯ ಭರ್ತಿಯಾಗಿರೊ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಜಲಾಶಯ ವೀಕ್ಷಣೆ ಮಾಡಿದರು.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಕೆ.ಆರ್.ಎಸ್. ಜಲಾಶಯ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ವೀಕ್ಷಣೆ ಮಾಡಿದರು. ಭದ್ರತೆಯ ನಡುವೆ ಜಲಾಶಯವನ್ನು ಲೋಕಾಯುಕ್ತ ನ್ಯಾಯಮೂರ್ತಿ ವೀಕ್ಷಣೆ ಮಾಡಿದರು.
ವಿಶ್ವನಾಥ್ ಶೆಟ್ಟಿ ಅವರಿಗೆ ತಹಸೀಲ್ದಾರ್ ನಾಗೇಶ್, ನೀರಾವರಿ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಜಲಾಶಯವನ್ನು ವೀಕ್ಷಣೆ ಮಾಡಿದ ಲೋಕಾಯುಕ್ತ ನ್ಯಾಯಮೂರ್ತಿಗಳು, ಅಧಿಕಾರಿಗಳಿಂದ ಜಲಾಶಯ ಹಾಗೂ ನೀರಿನ ಬಗ್ಗೆ ಮಾಹಿತಿ ಪಡೆದುಕೊಂಡರು