Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹರಿಯಾಣದ ನನ್ಹು ಜಿಲ್ಲೆಯಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ಅಕ್ರಮ ಗಣಿಗಾರಿಕೆ ಮಾಫಿಯಾ ಡಿಎಸ್ಪಿ ಸುರೇಂದ್ರ ಸಿಂಗ್ ಅವರನ್ನು ಬಲಿ ಪಡೆದಿದೆ. ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹವು ತೆರೆದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.
ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗ ಸುಳಿವು ಸಿಕ್ಕ ಬೆನ್ನಲ್ಲೇ ಡಿಎಸ್ಪಿ ಸುರೇಂದರ್ ಕುಮಾರ್ ಬಿಷ್ಣೋಯ್ ಅವರು ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ತೌಡು ಬೆಟ್ಟದಲ್ಲಿ ದಾಳಿ ನಡೆಸಲು ತೆರಳಿದ್ದರು. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾತನಾಡುತ್ತಾ ಡಿಎಸ್ಪಿ ತಮ್ಮ ಅಧಿಕೃತ ವಾಹನದ ಬಳಿ ನಿಂತಿದ್ದರು. ಈ ವೇಳೆ 12:10 ರ ಸುಮಾರಿಗೆ ಅವರು ಅಕ್ರಮ ಕಲ್ಲುಗಣಿಗಾರಿಕೆ ವಸ್ತುಗಳನ್ನು ಸಾಗಿಸುತ್ತಿದ್ದ ಡಂಪರ್ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ್ದರು. ಆದರೆ ಡಂಪರ್ ಚಾಲಕ ಪೊಲೀಸ್ ಅಧಿಕಾರಿ ಮೇಳೆ ಡಂಪರ್ ಹತ್ತಿಸಿದ್ದಾನೆ ಎಂದಿದ್ದಾರೆ