ಅದೃಷ್ಟದ ಬಗ್ಗೆ ನಂಬಿಕೆ ಇಲ್ಲ ಅಂದ್ರೆ ಈ ಸ್ಟೋರಿ ಓದಿ ...!!!!

Webdunia
ಮಂಗಳವಾರ, 26 ಜುಲೈ 2022 (19:32 IST)
ಕೇರಳದಲ್ಲಿ ಕುಟುಂಬವೊಂದು ಕಷ್ಟಗಳಿಂದ ನರಳುತ್ತಿತ್ತು. ಸಾಲದ ಶೂಲದಲ್ಲಿ ಸಿಕ್ಕಿಹಾಕಿಕೊಂಡ ಕುಟುಂಬ ಹೇಗಾದರೂ ಸರಿ ಸಾಲನ ಸುಳಿಯಿಂದ ತಪ್ಪಿಸಿಕೊಂಡು ಬದುಕಬೇಕೆಂದು ಸ್ವಂತ ಮನೆಯನ್ನೇ ಮಾರಾಟ ಮಾಡಲು ನಿರ್ಧಾರ ಮಾಡಿತ್ತು. ಆದರೆ ಅವರ ಪಾಲಿಗೆ ವಿಧಿ ಇನ್ನೂ ಚೆನ್ನಾಗಿರುವುದನ್ನೇ ಕಾಯ್ದಿರಿಸಿತ್ತು. ಪ್ರೀತಿಯ ಮನೆಯನ್ನು ಮಾರಾಟ ಮಾಡಿ ಅದು ಪರರ ಪಾಲಾಗಲು ಬರೀ 2 ಗಂಟೆ ಬಾಕಿ ಇತ್ತು. ಆದರೆ ಅಷ್ಟು ಹೊತ್ತಿಗೆ ಈ ಕುಟುಂಬಕ್ಕೆ ಬರೋಬ್ಬರಿ 1 ಕೋಟಿ ರೂಪಾಯಿಯ ಲಾಟರಿ ಹೊಡೆದಿದೆ.
 
 
ಇದು ಕೇಳುವುದಕ್ಕೆ ಅಚ್ಚರಿಯಾದರೂ ಕೇರಳದಲ್ಲಿ ನಡೆದ ನಿಜ ಘಟನೆ ಇದು. ಕೆಲವೊಮ್ಮೆ ದೇವರು ನಾವು ಬಯಸ್ಸಿದ್ದಂಕಿತಲೂ ಸ್ವಲ್ಪ ಉತ್ತಮವಾದುದನ್ನೇ ಕೊಡುತ್ತಾನೆ ಎಂದು ಹಿರಿಯರು ಹೇಳುವುದನ್ನು ಕೇಳಿರಬಹುದು. ಈ ಕುಟುಂಬದ ಪಾಲಿಗೆ ಈ ಮಾತು ಸತ್ಯವಾಗಿದೆ.
 
1 ಕೋಟಿ ಲಾಟರಿ ಬಹುಮಾನ
 
ಸಾಲದ ಸುಳಿಯಲ್ಲಿ ಸಿಲುಕಿದ್ದ ಕಾಸರಗೋಡಿನ ಪೇಂಟರ್‌ಗೆ ಮಂಜೇಶ್ವರದಲ್ಲಿ ತಾನು ಹೊಸದಾಗಿ ನಿರ್ಮಿಸಿದ ಮನೆಗೆ ಮಾರಾಟ ಮಾಡಲು ಟೋಕನ್ ಹಣ ಪಡೆಯುವ ಎರಡು ಗಂಟೆಗಳ ಮೊದಲು 1 ಕೋಟಿ ರೂಪಾಯಿ ಲಾಟರಿ ಬಹುಮಾನ ಲಭಿಸಿದೆ. ನಾನು ನಮ್ಮ ಮನೆಯನ್ನು ಉಳಿಸಬಲ್ಲೆ. ನನಗೆ ಈಗಲೂ ಇದನ್ನು ನಂಬಲಾಗುತ್ತಿಲ್ಲ' ಎಂದು ಮಂಜೇಶ್ವರದ ಪಾವೂರು ನಿವಾಸಿ ಮೊಹಮ್ಮದ್ ಬಾವ (50) ಹೇಳಿದರು
 
ಕಷ್ಟಪಟ್ಟು ಕಟ್ಟಿದ ಮನೆಯೇ ಕೈತಪ್ಪುತ್ತಿತ್ತು
 
ಭಾರೀ ಸಾಲದ ಸುಳಿಯಲ್ಲಿ ತತ್ತರಿಸಿರುವ ಬಾವ ಮತ್ತು ಅವರ ಪತ್ನಿ ಅಮಿನಾ (45) ಎಂಟು ತಿಂಗಳ ಹಿಂದೆ ನಿರ್ಮಿಸಿದ 2,000 ಚದರ ಅಡಿಯ ತಮ್ಮ ಮನೆಯನ್ನು ಬ್ಲಾಕ್‌ನಲ್ಲಿ ಇರಿಸಿದ್ದಾರೆ.
 
ಇಬ್ಬರು ಹೆಣ್ಮಕ್ಕಳೊಂದಿಗೆ ಬಾಡಿಗೆ ಮನೆಗೆ ಹೋದ ದಂಪತಿ
 
ಭಾನುವಾರ ಸಂಜೆ 5 ಗಂಟೆಗೆ, ಮನೆಯನ್ನು ಕೊಳ್ಳಲು ಒಪ್ಪಂದವನ್ನು ಮಾಡಿ ಟೋಕನ್ ಮೊತ್ತದೊಂದಿಗೆ ಮನೆಗೆ ಬರಲು ಒಪ್ಪಿಕೊಂಡಿತ್ತು. ನಮಗೆ 45 ಲಕ್ಷ ರೂಪಾಯಿ ಸಾಲ ಇರುವುದರಿಂದ ಮನೆಗೆ 45 ಲಕ್ಷ ರೂಪಾಯಿ ಬೇಕಿತ್ತು. ಆದರೆ ಬ್ರೋಕರ್ ಮತ್ತು ಪಕ್ಷ 40 ಲಕ್ಷ ರೂ ಎಂದಿದ್ದರು. ಆದರೆ ದಂಪತಿ ಯಾವುದೇ ಬೆಲೆಗೆ ಆ ರಾತ್ರಿ ಮನೆ ಬಿಡಲು ಒಪ್ಪಿಕೊಂಡರು. ಅವರ ಇಬ್ಬರು ಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಗೆ ತೆರಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಮುಂದಿನ ಸುದ್ದಿ
Show comments