Publish Date: Sun, 19 Nov 2023 (16:00 IST)
Updated Date: Sun, 19 Nov 2023 (16:03 IST)
ಬಳ್ಳಾರಿ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಂಚಿಸಿ ಜೀವ ಬೆದರಿಕೆ ಹಾಕಿದ ಗಂಭೀರ ಆರೋಪ ಕೇಳಿ ಬಂದಿದೆ.
ಯುವತಿ ನೀಡಿದ ದೂರಿನ ಮೇರೆಗೆ ಸಂಸದನ ಪುತ್ರನಾಗಿರುವ ಮೈಸೂರು ಮಹಾರಾಜ ಕಾಲೇಜಿನ ಉಪನ್ಯಾಸಕ ವೈ.ಡಿ.ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಐಪಿಎಸಿ ಸೆಕ್ಷನ್ 417 ,420 ಹಾಗೂ 506 ಅಡಿ ಎಫ್ಐಆರ್ ದಾಖಲಿಸಲಾಗಿದೆ.