ದೆಹಲಿಯಲ್ಲಿ ಮಹದಾಯಿ ಹೋರಾಟ ನಾಲ್ಕನೆ ದಿನಕ್ಕೆ

Webdunia
ಬುಧವಾರ, 2 ಮೇ 2018 (13:04 IST)
ಮಹದಾಯಿ ಮತ್ತು  ಕಳಸಾ ಬಂಡೂರಿ ಕುಡಿಯುವ ಯೋಜನೆ ಜಾರಿಗೆ ಒತ್ತಾಯಿಸಿ ದೆಹಲಿಯಲ್ಲಿ ಕರ್ನಾಟಕ ರೈತ ಸೇನಾ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೆ ನಾಲ್ಕನೇ ದಿನಕ್ಕೆ  ಕಾಲಿಟ್ಟಿದೆ.
 ಏ. 25 ರಂದು ರೈತ ಸೇನಾ ಅಧ್ಯಕ್ಷ ಹಾಗೂ ರೈತ ಮುಖಂಡ ವೀರೇಶ ಸೊಬರದಮಠ ನೇತೃತ್ವದಲ್ಲಿ ನವಲಗುಂದ ಹಾಗೂ ನರಗುಂದ ಭಾಗದ ನೂರಾರು ಹೋರಾಟಗಾರರು ದೆಹಲಿಗೆ ತೆರಳಿದ್ದು, ಕಳೆದ ನಾಲ್ಕು ದಿನಗಳಿಂದ ಮಹದಾಯಿ ಯೋಜನೆ ಜಾರಿಗೆ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಪ್ರಧಾನಿಯವರಿಗೆ ಯೋಜನೆ ಜಾರಿ ಮಾಡುವಂತೆ ಆದೇಶ ನೀಡಬೇಕು ಎನ್ನುವ ಬೇಡಿಕೆಯನ್ನು ಮುಂದಿಟ್ಟುಕೊಂಡು  ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 
 
ರೈತರೆಲ್ಲರೂ ಸೇರಿ ವಿಶ್ವ ಹಿಂದೂ ಪರಿಷತ್ತು  ಭವನದಿಂದ ಸಂಸತ ಭವನದವರೆಗೆ ಪಾದಯಾತ್ರೆ ಮೂಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆದರು. 
 
ರಾಷ್ಟ್ರಪತಿಗಳನ್ನು ಭೇಟಿಗೆ ಕಾಲಾವಕಾಶ ಕೇಳಿದ್ದು, ರಾಷ್ಟ್ರಪತಿಗಳನ್ನು ಭೇಟಿಯಾಗಿ ಸಮಸ್ಯೆ ಇತ್ಯರ್ಥ ಪಡಿಸಲು ಪ್ರಧಾನಿಗಳಿಗೆ ಸೂಚನೆ ನೀಡುವಂತೆ ಒತ್ತಾಯಿಸಲಿದ್ದಾರೆ.‌ ಒಂದು ವೇಳೆ ಯೋಜನೆ ಜಾರಿಗೆ  ಮಾಡದಿದ್ರೆ, ದಯಾಮರಣ ನೀಡಬೇಕೆಂದು ರಾಷ್ಟ್ರಪತಿಗಳಲ್ಲಿ ಮನವಿ ಮಾಡಲಿದ್ದಾರೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಮುಂದಿನ ಸುದ್ದಿ
Show comments