ಮಹಾಲಕ್ಷ್ಮಿ ಪೋಸ್ಟ್ ಮಾರ್ಟಮ್ ವರದಿ ಬಹಿರಂಗ: ಕೃತ್ಯದ ಭಯಾನಕ ಸತ್ಯಗಳು ಬಹಿರಂಗ

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (11:53 IST)
ಬೆಂಗಳೂರು: ನೇಪಾಳ ಮೂಲದ ಮಹಾಲಕ್ಷ್ಮಿ ಮರ್ಡರ್ ಕೇಸ್ ಗೆ ಸಂಬಂಧಪಟ್ಟಂತೆ ಇಂದು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗವಾಗಿದ್ದು ಇದರೊಂದಿಗೆ ಕೃತ್ಯ ಹೇಗೆ ನಡೆಯಿತು ಎಂಬುದೂ ಬಯಲಾಗಿದೆ.

ವಯ್ಯಾಲಿಕಾವಲ್ ನ ಮನೆಯೊಂದರಲ್ಲಿ ವಾಸವಿದ್ದ ಮಹಾಲಕ್ಷ್ಮಿಯನ್ನು ಭೀಕರವಾಗಿ ಹತ್ಯೆ ಮಾಡಿ ಮೃತದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟು ಹಂತಕ ಪರಾರಿಯಾಗಿದ್ದ. ಈಕೆಯ ಮೃತದೇಹವನ್ನು ಸಾವಿನ ನಂತರ ಪೀಸ್ ಮಾಡಲಾಗಿದೆಯೇ ಎನ್ನುವುದು ಇನ್ನೂ ಖಚಿತವಾಗಿರಲಿಲ್ಲ.

ಬರೋಬ್ಬರಿ 2 ಗಂಟೆಗಳ ಕಾಲ ವೈದ್ಯರು ಶ್ರಮವಹಿಸಿ ಮೃತಳ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಇಂದು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗವಾಗಿದ್ದು ಇದು ಆಕೆಯ ಮರ್ಡರ್ ಮಿಸ್ಟರಿಗೆ ಹೊಸ ಟ್ವಿಸ್ ನೀಡುವ ನಿರೀಕ್ಷೆಯಿದೆ. ಇಂದು ಬೌರಿಂಗ್ ಆಸ್ಪತ್ರೆಯ ವೈದ್ಯರು ಪೊಲೀಸರಿಗೆ ಮರಣೋತ್ತರ ವರದಿ ಅಧಿಕೃತವಾಗಿ ಸಲ್ಲಿಸಲಿದ್ದಾರೆ.

ಇದೀಗ ಪ್ರಾಥಮಿಕ ವರದಿ ಸಲ್ಲಿಕೆಯಾಗಲಿದ್ದು, ಬಳಿಕ ಕೆಲವೊಂದು ಟೆಸ್ಟ್ ರಿಪೋರ್ಟ್ ಗಳ ಆಧಾರದ ಮೇಲೆ ಅಂತಿಮ ವರದಿ ಕೆಲವು ದಿನಗಳ ನಂತರ ಸಲ್ಲಿಕೆ ಮಾಡಲಿದ್ದಾರೆ. ಪ್ರಾಥಮಿಕ ವರದಿಯಲ್ಲಿ ಬಹಿರಂಗವಾದ ಅಂಶಗಳು ಇಲ್ಲಿದೆ:

ಮಹಾಲಕ್ಷ್ಮಿಯ ಎದೆ ಮತ್ತು ಹೊಟ್ಟೆ ಭಾಗಕ್ಕೆ ಚುಚ್ಚಲಾಗಿದೆ.
ಚುಚ್ಚಿ ಸಾಯಿಸಿದ ಬಳಿಕ ತಲೆ ಬೇರ್ಪಡಿಸಲಾಗಿದೆ.
ತಲೆ ಬೇರ್ಪಡಿಸಿದ ಬಳಿಕ ಒಟ್ಟು 52 ಪೀಸ್ ಮಾಡಲಾಗಿದೆ
ಮರಣೋತ್ತರ ಪರೀಕ್ಷೆ ವೇಳೆ ಇಷ್ಟೂ ಭಾಗಗಳನ್ನು ವೈದ್ಯರು ಮರು ಜೋಡಿಸಿದ್ದಾರೆ.
ಶ್ವಾಸಕೋಶವನ್ನು ಮಾತ್ರ ಬೇರ್ಪಡಿಸಲಾಗಿತ್ತು
ಇದೀಗ ಕರುಳಿನ ಭಾಗ ಮತ್ತು ಹೊಟ್ಟೆ ಭಾಗವನ್ನು ಟೆಸ್ಟ್ ಗೆ ಕಳುಹಿಸಲಾಗಿದೆ
ಸಾಯಿಸುವ ಮುನ್ನ ವಿಷ ಅಥವಾ ಪ್ರಜ್ಞೆ ತಪ್ಪಿಸಲಾಗಿದೆಯೇ ಎಂದು ವರದಿಯಿಂದ ತಿಳಿಯಬೇಕಿದೆ
ದೇಹದಲ್ಲಿ ವಿಷ ಸೇವನೆ ಖಚಿತವಾಗಲು ಕನಿಷ್ಠ 2 ತಿಂಗಳು ಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

Karnataka Weather: ಮುಂಗಾರು ಕ್ಷೀಣವಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದೂ ಮಳೆ ನಿರೀಕ್ಷೆ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಮುಂದಿನ ಸುದ್ದಿ
Show comments