Webdunia - Bharat's app for daily news and videos

Install App

ಸಾಕು ನಾಯಿಯ ಚೈನು ಕಟ್ಟಿಕೊಂಡು ನೇಣು ಹಾಕಿಕೊಂಡ ವ್ಯಕ್ತಿ: ಕಾರಣವೇನು ಗೊತ್ತಾ

Krishnaveni K
ಬುಧವಾರ, 1 ಜನವರಿ 2025 (11:47 IST)
ನೆಲಮಂಗಲ: ಸಾಕು ನಾಯಿಯ ಚೈನು ಕಟ್ಟಿಕೊಂಡೇ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದು ಇದರ ಹಿಂದಿನ ಕಾರಣ ತಿಳಿದರೆ ಶಾಕ್ ಆಗುತ್ತೀರಿ.
 

ನೆಲಮಂಗಲದಲ್ಲಿ ಈ ಘಟನೆ ನಡೆದಿದೆ. 33 ವರ್ಷದ ರಾಜಶೇಖರ್ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರ ನಾಯಿಗೆ ಬಳಸುತ್ತಿದ್ದ ಸಂಕೋಲೆಯನ್ನೇ ಕುಣಿಕೆ ಮಾಡಿಕೊಂಡು ಜೀವಕ್ಕೆ ಅಂತ್ಯ ಹಾಡಿದ್ದಾರೆ.

ರಾಜಶೇಖರ್ ಬಳಿ ಜರ್ಮನ್ ಶೆಫರ್ಡ್ ತಳಿಯ ನಾಯಿಯಿತ್ತು. ಆದರೆ ಈ ನಾಯಿ ನಿನ್ನೆ ಮೃತಪಟ್ಟಿತ್ತು. 9 ವರ್ಷಗಳ ಹಿಂದೆ ಈ ನಾಯಿಯನ್ನು ರಾಜಶೇಖರ್ ಖರೀದಿಸಿ ತಂದಿದ್ದರು. ಆ ನಾಯಿಯನ್ನು ಮಗುವಂತೆ ನೋಡಿಕೊಳ್ಳುತ್ತಿದ್ದರು. ಹೀಗಾಗಿ ನಾಯಿ ಸತ್ತ ಸುದ್ದಿ ಅವರನ್ನು ತೀವ್ರ ಬೇಸರಗೊಳಿಸಿತ್ತು.

ಇದೇ ಕಾರಣಕ್ಕೆ ನಾಯಿಯ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ಬಂದ ಅವರು ಅದೇ ನಾಯಿಯ ಸಂಕೋಲೆಯನ್ನು ಬಳಸಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಇಂದು ಬೆಳಗಿನ ಜಾವ ಅವರ ಮೃತದೇಹ ಪತ್ತೆಯಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ನಾಯಿಯ ಸಾವಿನಿಂದ ಆಗಿರುವ ಆಘಾತಕ್ಕೇ ಕೃತ್ಯವೆಸಗಿರುವುದಾಗಿ ತಿಳಿದುಬಂದಿದೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಾಯಿ ಎಂದರೆ ಕೆಲವರು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಆದರೆ ಅದು ಈ ಮಟ್ಟಿಗಾ ಎಂದು ಅಚ್ಚರಿಯಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments