Webdunia - Bharat's app for daily news and videos

Install App

ವಿಚ್ಛೇದಿತ ಪತ್ನಿಯ ಅಶ್ಲೀಲ ಫೋಟೋಗಳನ್ನು ಡೇಟಿಂಗ್‌ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಿದ ಪತಿ ಅರೆಸ್ಟ್

Webdunia
ಶನಿವಾರ, 28 ಅಕ್ಟೋಬರ್ 2017 (12:07 IST)
ವಿಚ್ಚೇದಿತ ಪತ್ನಿಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಫೋಟೋ ಮತ್ತು ಪ್ರೋಫೈಲ್‌ನ್ನು ಮ್ಯಾಟ್ರಿಮೋನಿಯಲ್ ಮತ್ತು ಡೇಟಿಂಗ್ ವೆಬ್‌‍ಸೈಟ್‌ನಲ್ಲಿ ಅಪ್ಲೋಡ್ ಮಾಡಿದ 31 ವರ್ಷ ವಯಸ್ಸಿನ ಸಾಫ್ಟ್‌ವೇರ್‌ ಇಂಜಿನಿಯರ್‌ನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರತಿಷ್ಠಿದ ಐಟಿ ಕಂಪೆನಿಯೊಂದರಲ್ಲಿ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಯಲ್ಲಿರುವ ಹರ್ಷವರ್ಧನ್ ಭಟ್ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
  
ಪೊಲೀಸ್ ಮೂಲಗಳ ಪ್ರಕಾರ, ಹರ್ಷವರ್ಧನ್ ಭಟ್ ಮತ್ತು ಆತನ ಪತ್ನಿ ವಿಚ್ಚೇದನಕ್ಕಾಗಿ ಕೌಟಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ವಿಚ್ಚೇದನ ಪ್ರಕರಣ ನೆನೆಗುದಿಯಲ್ಲಿದೆ ಎನ್ನಲಾಗಿದೆ.
 
ಏತನ್ಮಧ್ಯೆ, ಭಟ್ ಪತ್ನಿಯ ಮೇಲೆ ಸೇಡು ತೀರಿಸಿಕೊಳ್ಳಲು ವೇಶ್ಯಾವಾಟಿಕೆಗೆ ಪ್ರಚೋದಿಸುವ ಹಲವಾರು ವೆಬ್‌ಸೈಟ್‌ಗಳಲ್ಲಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್‌ನ್ನು ಅಪ್ಲೋಡ್ ಮಾಡಿದ್ದಾನೆ. ನಂತರ ಪತ್ನಿಗೆ ಅನೇಕರು ಕರೆ ಮಾಡಿ ಕಾಲ್‌ಗರ್ಲ್‌ ರೀತಿಯಲ್ಲಿ ವರ್ತಿಸಿದ್ದಾರೆ.
 
ಇದರಿಂದ ಆತಂಕಗೊಂಡ ಆರೋಪಿ ಹರ್ಷವರ್ಧನ್ ಪತ್ನಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನ ಬಗ್ಗೆ ತನಿಖೆ ನಡೆಸಿದ ಪೊಲೀಸರು ಹರ್ಷವರ್ಧನ್ ಭಟ್‌ನ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್ ವಶಕ್ಕೆ ತೆಗೆದುಕೊಂಡು ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments