Webdunia - Bharat's app for daily news and videos

Install App

ಮಂಗಳೂರು, ಬೆಂಗಳೂರು ನಡುವೆ ಮತ್ತೆ ರೈಲು ಸಂಚಾರ ಸ್ಥಗಿತ

Krishnaveni K
ಶನಿವಾರ, 10 ಆಗಸ್ಟ್ 2024 (11:47 IST)
ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿ ಮೇಲೆ ಗುಡ್ಡ ಕುಸಿತವಾಗಿರುವುದರಿಂದ ಬೆಂಗಳೂರು ಮಂಗಳೂರು ನಡುವೆ ಮತ್ತೆ ಸ್ಥಗಿತವಾಗಿದೆ. ಮಣ್ಣು ತೆರವು ಕಾರ್ಯ ತರಾತುರಿಯಲ್ಲಿ ನಡೆಯುತ್ತಿದೆ.

ಭೂ ಕುಸಿತದಿಂದಾಗಿ ಮಧ್ಯರಾತ್ರಿಯಿಂದ ರೈಲುಗಳು ನಿಂತಲ್ಲೇ ನಿಂತಿವೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಹಳಿ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಹಳಿಗಳಿಂದ ಮಣ್ಣು ತೆರವು ಮಾಡಲು ಜೆಸಿಬಿ ನೆರವು ಪಡೆಯಲಾಗಿದೆ. ಇತ್ತೀಚೆಗಷ್ಟೇ ರೈಲು ಪುನರಾರಂಭಗೊಂಡಿತ್ತು.

ಎಡಕುಮೇರಿಯಲ್ಲಿ ಗುಡ್ಡ ಕುಸಿದಿದ್ದರಿಂದ ಕೆಲವು ದಿನಗಳಿಂದ ರೈಲು ಸಂಚಾರ ಸ್ಥಗಿತಗೊಂಡಿತ್ತು. ಮೊನ್ನೆಯಷ್ಟೇ ರೈಲು ಸಂಚಾರ ಪುನರಾರಂಭಗೊಂಡಿತ್ತು. ಎರಡೇ ದಿನಕ್ಕೆ ಗುಡ್ಡ ಕುಸಿತವಾಗಿ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಕಣ್ಣೂರು ಎಕ್ಸ್ ಪ್ರೆಸ್ ಪ್ರಯಾಣಿಕರಿಗೆ ಆಲೂರು ಸ್ಟೇಷನ್ ನಲ್ಲಿ ಊಟ-ಉಪಹಾರದ ವ್ಯವಸ್ಥೆ ಮಾಡಲಾಗಿದೆ.

ಕಾರವಾರ-ಕೆಎಸ್ ಆರ್  ಬೆಂಗಳೂರು ಪಂಚಗಂಗ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಪ್ರಯಾಣಿಕರಿಗೆ ದೋಣಿಗಲ್ ನಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ ಬಳಿಕ ಪ್ರಯಾಣಿಕರಿಗೆ ಬೇರೆ ವಾಹನದ ವ್ಯವಸ್ಥೆ ಮಾಡಿ ಗಮ್ಯ ಸ್ಥಳ ತಲುಪಿಸಲು ಸಹಾಯ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments