Webdunia - Bharat's app for daily news and videos

Install App

ಶ್ರೀರಾಮನಿಗೆ ಅವಮಾನ ಮಾಡಿದ್ದ ಶಿಕ್ಷಕಿ ಅಮಾನತು

Krishnaveni K
ಸೋಮವಾರ, 12 ಫೆಬ್ರವರಿ 2024 (17:13 IST)
ಮಂಗಳೂರು: ಪ್ರಭು ಶ್ರೀರಾಮಚಂದ್ರನಿಗೆ ಅವಮಾನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಅಮಾನತು ಮಾಡಿರುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಶ್ರೀರಾಮನಿಗೆ ಅವಹೇಳನ ಮಾಡಿದ್ದನ್ನು ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮುತ್ತಿಗೆಗೆ ಯತ್ನಿಸುವ ವೇಳೆ ಮಧ್ಯಪ್ರವೇಶಿಸಿದ ಆಡಳಿತ ಸಿಬ್ಬಂದಿ ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ಹೇಳಿದ್ದಾರೆ.

ಶಿಕ್ಷಕಿ ವಿರುದ್ಧ ಹೆಚ್ಚಿದ ಆಕ್ರೋಶ
ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆ ಆರೋಪ ಕೇಳಿಬಂದಿದ್ದು, ಸ್ಥಳೀಯರಿಂದ ಶಾಲೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಲೆ ವಿರುದ್ಧ ಹಿಂದೂ ಸಂಘಟನೆಗಳು ಭಾರೀ ಪ್ರತಿಭಟನೆಗೆ ಮುಂದಾದಾಗ ಪೊಲೀರು ತಡೆದರು. ಈ ವೇಳೆ ಸ್ಥಳೀಯರು ಶಿಕ್ಷಕಿ ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ಅಧಿಕೃತ ಪತ್ರ ತೋರಿಸಲಾಯಿತು.

ಪ್ರಕರಣದ ಹಿನ್ನಲೆ
ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ಅಯೋಧ್ಯೆ ರಾಮಮಂದಿರ ಮತ್ತು ಪ್ರಭು ರಾಮಚಂದ್ರನ ಬಗ್ಗೆ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿದ್ದರು.ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ್ದಾರೆ. ಇದನ್ನು ವಿದ್ಯಾರ್ಥಿಗಳು ಪೋಷಕರಿಗೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳ ಜೊತೆಗೂಡಿ ಪೋಷಕರು ಶಾಲೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದರು.  ಅಲ್ಲದೆ ಶಿಕ್ಷಕಿ ವಿರುದ್ಧ ಪೊಲೀಸರಿಗೂ ದೂರು ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments