Webdunia - Bharat's app for daily news and videos

Install App

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

Krishnaveni K
ಶುಕ್ರವಾರ, 2 ಮೇ 2025 (18:15 IST)
ಮಂಗಳೂರು: ಸುಹಾಸ್ ಶೆಟ್ಟಿಯವರ ಹತ್ಯೆಯಿಂದ ಅವರ ಬಡ ಕುಟುಂಬದ ಆಧಾರಸ್ತಂಭವೇ ಕಳಚಿಬಿದ್ದಂತಾಗಿದೆ. ಸುಹಾಸ್ ಶೆಟ್ಟಿಯವರ ಕುಟುಂಬಕ್ಕೆ ಬಿಜೆಪಿ ಪರವಾಗಿ 25 ಲಕ್ಷ ನೀಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಈ ಘಟನೆಯ ಗಂಭೀರತೆಯನ್ನು ಅರ್ಥ ಮಾಡಿಕೊಂಡು, ಕುಟುಂಬದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ರಾಜ್ಯ ಸರಕಾರ ಪರಿಹಾರ ಘೋಷಿಸಬೇಕೆಂದು ಅವರು ಆಗ್ರಹಿಸಿದರು. ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್‍ಐಎ) ಘಟನೆ ತನಿಖೆ ಮಾಡಬೇಕೆಂದು ಒತ್ತಾಯಿಸಿದರು.
 
ಈ ದುರ್ಘಟನೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅವರ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ನೀಡಿಲ್ಲ; ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ, ಗೃಹ ಇಲಾಖೆಯ ವೈಫಲ್ಯ ಮತ್ತು ಕಾಂಗ್ರೆಸ್ ಸರಕಾರದ ನೀತಿಯಿಂದ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದರು.

ರಾಜ್ಯದ ಜನತೆಗೆ ಹಾಗೂ ಹಿಂದೂ ಕಾರ್ಯಕರ್ತರಿಗೆ ಕಾಂಗ್ರೆಸ್ ಸರಕಾರದ ಕುರಿತು ವಿಶ್ವಾಸ ಇಲ್ಲದಂತಾಗಿದೆ ಎಂದ ಅವರು, ನಾನು, ವಿಪಕ್ಷ ನಾಯಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದೇವೆ. ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದೇವೆ ಎಂದು ವಿವರಿಸಿದರು.
ಇಂಥ ಘಟನೆಗಳು ನಡೆದಾಗ ರಾಜ್ಯ ಸರಕಾರ ಯಾವತ್ತೂ ಹಿಂದೂ ಕಾರ್ಯಕರ್ತರ ಪರವಾಗಿ ನಿಂತಿಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರಕ್ಕೆ ಮನುಷ್ಯತ್ವ ಇದ್ದರೆ ಆ ಬಡ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು. ಎನ್‍ಐಎಯಿಂದ ತನಿಖೆ ಆಗಬೇಕೆಂದು ನಿರ್ಧರಿಸಲಿ ಎಂದು ಒತ್ತಾಯಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments