Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಕಾಂಗ್ರೆಸ್ ನಲ್ಲಿ ಮೇಯರ್ ಮೈತ್ರಿ ಕಿತ್ತಾಟ ಮತ್ತೆ ಶುರುವಾಗಿದ್ದು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ತನ್ವೀರ್ ಸೇಠ್ ಬೆಂಬಲಿಗರು ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ. ಆದಕಾರಣ 100ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಮೈಸೂರು ಕಾಂಗ್ರೆಸ್ ಘಟಕ ಮೂವರ ಅಮಾನತು ಮಾಡಿದೆ.
ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಇದನ್ನು ಖಂಡಿಸಿ ರಾಜೀನಾಮೆಗೆ ಮುಂದಾಗಿದ್ದಾರೆ. ಕಾರ್ಯಕರ್ತರು ಒಬ್ಬೊಬ್ಬರಾಗಿ ಕಾಂಗ್ರೆಸ್ ಕಚೇರಿಯ ಬಳಿ ಬಂದು ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.