Webdunia - Bharat's app for daily news and videos

Install App

ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ಸಂಪರ್ಕ..!

geetha
ಶನಿವಾರ, 2 ಮಾರ್ಚ್ 2024 (17:01 IST)
ಬೆಂಗಳೂರು-ಮಾದವಾರದಿಂದ ತುಮಕೂರಿಗೆ 52.41 ಕಿ.ಮೀ ದೂರವಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ಸಂಪರ್ಕ ನಿರ್ಮಾಣವಾಗುವ ಸಾಧ್ಯತೆಗಳಿವೆ. ಮಾರ್ಚ್ 1ರಿಂದ ಟೆಂಡರ್ ದಾಖಲೆಗಳನ್ನು ನಿಗಮದ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಬಿಡ್ ಸಲ್ಲಿಸಲು ಏಪ್ರಿಲ್ 2 ಅಂತಿಮ ದಿನವಾಗಿರುತ್ತದೆ. ಇತ್ತೀಚೆಗೆ ಮಂಡಿಸಿದ 2024-25ರ ತಮ್ಮ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ತುಮಕೂರು ಮತ್ತು ದೇವನಹಳ್ಳಿಗೆ ಮೆಟ್ರೋ ಸಂಪರ್ಕ ನಿರ್ಮಿಸುವ ಬಗ್ಗೆ ಪ್ರಸ್ತಾಪಿಸಿದ್ದರು.
 
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್) ಬೆಂಗಳೂರಿನ ಮಾದಾವಾರದಿಂದ ತುಮಕೂರುವರೆಗೆ ಮೆಟ್ರೋ ಸಂಪರ್ಕ ಕಲ್ಪಿಸಲು ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಲು ಮುಕ್ತ ಟೆಂಡರ್ ಆಹ್ವಾನಿಸಲಾಗಿದೆ.ಶೀಘ್ರವೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಯವರೆಗೆ ಮೆಟ್ರೋ ಸಂಪರ್ಕ ಕುರಿತು ಕಾರ್ಯಸಾಧ್ಯತೆ ಕುರಿತು ಅಧ್ಯಯನ ನಡೆಸಲು ಬಿಎಂಆರ್‌ಸಿಎಲ್ ಟೆಂಡರ್ ಆಹ್ವಾನಿಸಲಿದೆ ಎಂದು ತಿಳಿದು ಬಂದಿದೆ. 
 
ಆರಂಭದಲ್ಲಿ ನಮ್ಮ ಮೆಟ್ರೋದ ಹಸಿರು ಮಾರ್ಗವನ್ನು ಮಾದಾವಾರದಿಂದ ಕುಣಿಗಲ್ ಕ್ರಾಸ್‌ವರೆಗೆ 11 ಕಿಮೀವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಗೃಹ ಸಚಿವರು ಮತ್ತು ತುಮಕೂರು ಜಿಲ್ಲೆಯ ಕೊರಟಗೆರೆ ಶಾಸಕರು ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಮೆಟ್ರೋ ಜಾಲವನ್ನು ತಮ್ಮ ತವರು ಜಿಲ್ಲೆ ತುಮಕೂರಿಗೆ ವಿಸ್ತರಿಸಲು ಆಸಕ್ತಿ ತೋರಿಸಿದ್ದಾರೆ.ಬೆಂಗಳೂರಿನ ಒಳಗೆ 34 ಕಿಮೀ ಉದ್ದದ ಸುರಂಗ ಮಾರ್ಗ, ವೈಟ್ ಫೀಲ್ಡ್ ನಿಂದ ದೊಮ್ಮಲೂರುವರೆಗಿನ 16 ಕಿಮೀ, ಕಾಟಂನಲ್ಲೂರು ಗೇಟ್ ನಿಂದ ಸರ್ಜಾಪುರ ರಸ್ತೆ ಮತ್ತು ಹೆಬ್ಬಾಳವರೆಗಿನ 52 ಕಿಮೀ ಮಾರ್ಗದ ಮೆಟ್ರೋ ಜಾಲ ನಿರ್ಮಾಣವಾಗಲಿದೆ. ಸಧ್ಯಕ್ಕೆ ಈ ಜಾಲ ಕುರಿತು ಸರಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲವಾದರೂ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು  ಎಂದು ಬಿ ಎಂ ಆರ್ ಸಿ ಎಲ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments