Webdunia - Bharat's app for daily news and videos

Install App

HMPV ವೈರಸ್ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿದ ಮಹತ್ವದ ಪ್ರಕಟಣೆ ವಿಡಿಯೋ ಇಲ್ಲಿದೆ

Krishnaveni K
ಸೋಮವಾರ, 6 ಜನವರಿ 2025 (15:46 IST)
ಬೆಂಗಳೂರು: ಎಚ್ ಎಂಪಿವಿ ವೈರಸ್ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ ಎಚ್ ಎಂಪಿವಿ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಕಟಣೆ ನೀಡಿದ್ದಾರೆ. ಈ ವೈರಸ್ ಬಗ್ಗೆ ಎಚ್ಚರಿಕೆ ಸಾಕು, ಆತಂಕ ಬೇಡ ಎಂದು ಸಚಿವರು ಅಭಯ ನೀಡಿದ್ದಾರೆ.

ಬೆಂಗಳೂರಿನಲ್ಲಿ 8 ತಿಂಗಳ ಮತ್ತು 3 ತಿಂಗಳ ಮಗುವಿಗೆ ಎಚ್ ಎಂಪಿವಿ ಸೋಂಕು ಖಚಿತವಾಗಿತ್ತು. ಇದು ದೇಶದಲ್ಲೇ ಮೊದಲ ಕೇಸ್ ಆಗಿತ್ತು. ಚೀನಾದಲ್ಲಿ ಅಬ್ಬರಿಸುತ್ತಿರುವ ಈ ಸೋಂಕು ರೋಗ ಭಾರತಕ್ಕೂ ಕಾಲಿಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಇದರ ಬೆನ್ನಲ್ಲೇ ಮಾಹಿತಿ ನೀಡಿರುವ ದಿನೇಶ್ ಗುಂಡೂರಾವ್, ಈ ವೈರಸ್ ಹೊಸದೇನಲ್ಲ. ಬಹಳ ಕಾಲದಿಂದಲೂ ಇದೆ. ಈ ವೈರಸ್ ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ. ದೇಶದಲ್ಲಿ ನೂರಾರು ರೀತಿಯ ಎಚ್ ಎಂಪಿವಿ ವೈರಸ್ ಇದೆ. ಚೀನಾದಲ್ಲಿ ಮ್ಯೂಟೇಟ್ ಆಗಿದೆಯೋ ನನಗೆ ಗೊತ್ತಿಲ್ಲ. ಇದರ ಬಗ್ಗೆ ಕೇಂದ್ರ ವರದಿ ನೀಡಬೇಕು.

ಕರ್ನಾಟಕದಲ್ಲಿ 2 ಲಕ್ಷ 36 ಸಾವಿರ ಐಎಲ್ಐ ಕೇಸ್ ಗಳಿವೆ. ಗುಜರಾತ್, ಪುದುಚೇರಿಯಂತಹ ರಾಜ್ಯಗಳಲ್ಲೂ ಎಚ್ ಎಂಪಿವಿ ಕೇಸ್ ಗಳಿವೆ. ಚಳಿಗಾಲದಲ್ಲಿ ಸಹಜವಾಗಿಯೇ ಶೀತ, ಕೆಮ್ಮು ಇರುತ್ತದೆ.  ಆದರೆ ಇಂತಹ ಆರೋಗ್ಯ ಲಕ್ಷಣವೆಲ್ಲವೂ ಎಚ್ ಎಂಪಿವಿ ಅಲ್ಲ. ಎಚ್ ಎಂಪಿವಿ ವೈರಸ್ ಗುಣಮುಖವಾದ ರೋಗವಲ್ಲ. ಈಗಾಗಲೇ ವೈರಸ್ ತಗುಲಿರುವ ಇಬ್ಬರು ಮಕ್ಕಳೂ ಗುಣಮುಖರಾಗಿದ್ದಾರೆ. ಹೀಗಾಗಿ ಮಾಸ್ಕ್ ಹಾಕುವುದು, ಲಾಕ್ ಡೌನ್ ಮಾಡುವ ಅಗತ್ಯವೇನೂ ಇಲ್ಲ. ಎಚ್ಚರಿಕೆಯಿಂದಿರಬೇಕು ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments