Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ಮಹಿಳೆ: ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದ ಜಮೀರ್ ಅಹ್ಮದ್

Krishnaveni K
ಗುರುವಾರ, 13 ಮಾರ್ಚ್ 2025 (11:31 IST)
ಬೆಂಗಳೂರು: ತಮ್ಮ ಸ್ವ ಕ್ಷೇತ್ರದಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬೆನ್ನಲ್ಲೇ ಸ್ಥಳೀಯರು ಶಾಸಕ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 20 ವರ್ಷಗಳಿಂದ ಜಮೀರ್ ನಮ್ಮ ಕ್ಷೇತ್ರದ ಶಾಸಕರು. ಆದರೆ ಇದುವರೆಗೆ ನಮ್ಮ ಏರಿಯಾಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಪಕ್ಕದ ಮುಸ್ಲಿಮರ ಏರಿಯಾಗೆ ಎಲ್ಲಾ ಮಾಡ್ತಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು.

ಇದೀಗ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆ ಬಗ್ಗೆ ವಿವರಣೆ ಪಡೆದುಕೊಂಡಿದ್ದಾರೆ.  ಈ ವೇಳೆ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ಮಹಿಳೆಯರ ಗುಂಪು ಜಮೀರ್ ಅಹ್ಮದ್ ಗೆ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡಿದ್ದಾರೆ. ನೀರಿನ ವ್ಯವಸ್ಥೆಯಿಲ್ಲ, ಕಸ ವಿಲೇವಾರಿ ವ್ಯವಸ್ಥೆಯಿಲ್ಲ. ಎಲ್ಲಾ ಮಾಡಿಕೊಡಿ ಎಂದು ಕೇಳಿದ್ದಾರೆ.

ಇದಕ್ಕೆ ಜಮೀರ್ ಅಹ್ಮದ್ ಕೂಡಾ ಸ್ಪಂದಿಸಿದ್ದು ಎಲ್ಲಾ ಮಾಡೋಣ ಎಂದಿದ್ದಾರೆ. ಇನ್ನು, ಸಂತ್ರಸ್ತ ಮಹಿಳೆಯ ಕುಟುಂಬಸ್ಥರನ್ನೂ ಕರೆದು ಸಾಂತ್ವನ ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳನ್ನೂ ಶೀಘ್ರದಲ್ಲೇ ಬಗೆಹರಿಸಿಕೊಡುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments