ಸಿದ್ದರಾಮೋತ್ಸವದ ವೇಳೆಯಲ್ಲಿ ನಾಪತ್ತೆಯಾದ ವ್ಯಕ್ತಿ ಪತ್ತೆ

Webdunia
ಶುಕ್ರವಾರ, 16 ಸೆಪ್ಟಂಬರ್ 2022 (15:23 IST)
ಸಿದ್ದರಾಮೋತ್ಸವಕ್ಕೆ ತೆರಳಿ ನಾಪತ್ತೆಯಾಗಿದ್ದ ಬಾಗಲಕೋಟೆಯ ಗಿರಿಮಲ್ಲ ಖಂಡೇಕರ್ ಎಂಬುವವರು ಕೊನೆಗೂ ಒಂದೂವರೆ ತಿಂಗಳ ಬಳಿಕ ಕೊನೆಗೂ ಪತ್ತೆಯಾಗಿದ್ದಾರೆ.
 
ಜಮಖಂಡಿ ತಾಲೂಕಿನ ಅಡಿಹುಡಿ ಗ್ರಾಮದ ನಿವಾಸಿ ಗಿರಿಮಲ್ಲ ಖಂಡೇಕರ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ.
ಅಗಸ್ಟ್​ 2 ರಂದು ಗ್ರಾಮಸ್ಥರ ಜತೆಗೆ ಇವರು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಆದರೆ ಮನೆಗೆ ವಾಪಸಾಗಿರಲಿಲ್ಲ. ಅಡಿಹುಡಿ ಗ್ರಾಮದಿಂದ ಬಸ್ ಮೂಲಕ 50 ಜನ ತೆರಳಿದ್ದ ಇವರು ವಾಪಸಾಗದೇ ಮನೆಯವರೆಲ್ಲರೂ ಚಿಂತೆಗೀಡಾಗಿದ್ದರು.
 
'ದುಡ್ಡಿನ ಆಮಿಷ ಒಡ್ಡಿ ಮಗನನ್ನು ಕರೆದುಕೊಂಡು ಹೋಗಲಾಗಿತ್ತು. ಈಗ ಆತ ಪತ್ತೆಯಿಲ್ಲ' ಎಂದು ಗಿರಿಮಲ್ಲ ತಾಯಿ ಕಣ್ಣೀರು ಹಾಕಿದ್ದರು. ಇದು ಭಾರಿ ಸುದ್ದಿಯಾಗುತ್ತಲೇ ಖುದ್ದಿ ಸಿದ್ದರಾಮಯ್ಯ ಗಿರಿಮಲ್ಲ ಅವರ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ್ದರು. 'ನಿಮ್ಮ ಮಗ ವಾಪಸ್​ ಬಂದೇ ಬರುತ್ತಾನೆ' ಎಂದಿದ್ದರು. 'ಗಿರಿಮಲ್ಲ ಜೀವಂತ ಇದ್ದಾನೆ, ಅವನಿಗೆ ಏನೂ ಆಗಿಲ್ಲ, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದಷ್ಟು ಬೇಗ ನಿಮ್ಮ ಮಗ ಮನೆಗೆ ಬರ್ತಾನೆ' ಎಂದಿದ್ದ ಸಿದ್ದರಾಮಯ್ಯ, 'ಸೆ. 27ಕ್ಕೆ ಮತ್ತೆ ಬಂದು ಆರ್ಥಿಕ ಸಹಾಯ ಮಾಡುವೆ' ಎಂದಿದ್ದರು.
 
ಮಗ ಬರುತ್ತಾನೆ ಎನ್ನುವ ಸಿದ್ದರಾಮಯ್ಯ ಅವರ ಭವಿಷ್ಯ ನಿಜವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments