Webdunia - Bharat's app for daily news and videos

Install App

ವೈರಲ್ ಆಗಿರುವುದು ಮಿಕ್ಸಿಂಗ್ ವಿಡಿಯೋಗಳು, ಅವೆಲ್ಲ ಪ್ರಜ್ವಲ್‌ಗೆ ಸೇರಿದ್ದಲ್ಲ: ವಕೀಲ ದೇವರಾಜೇಗೌಡ

Sampriya
ಸೋಮವಾರ, 6 ಮೇ 2024 (20:25 IST)
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಇಡೀ ದೇಶದಲ್ಲೇ ದೊಡ್ಡ ಸದ್ದು ಮಾಡುತ್ತಿದೆ. ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ ಸಂತ್ರಸ್ಥೆಯರನ್ನು ಕರೆತಂದು ಸ್ಥಳ ಮಹಜರು ಮಾಡಿದ್ದಾರೆ.

ಇದೀಗ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು   ಹಾಸನದ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಈ ಆರೋಪ ಮಾಡಿದ್ದಾರೆ.

ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಹಿಂದಿನ ರೂವಾರಿ ಬೇರೆ ಯಾರೂ ಅಲ್ಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪ ಮಾಡಿದರು.

ಪೆನ್ ಡ್ರೈವ್ ವಿಡಿಯೋ ವೈರಲ್ ಮಾಡುವ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು. ಸದ್ಯ ವೈರಲ್ ಆಗಿರುವ ವಿಡಿಯೋಗಳು ನನ್ನ ಪೆನ್ ಡ್ರೈವ್‌ನಲ್ಲಿ ಇರೋದಲ್ಲ. ಈಗ ಹೊರ ಬಂದಿರುವ ವಿಡಿಯೋಗೂ ನನಗೂ ಸಂಬಂಧ ಇಲ್ಲ. ಈ ವೀಡಿಯೋಗಳೆಲ್ಲವೂ ಮಿಕ್ಸಿಂಗ್ ವಿಡಿಯೋಗಳು. ಇದು ಸಂಪೂರ್ಣವಾಗಿ ಆರೋಪಿಗೆ ಸಂಬಂಧಿಸಿದ್ದಲ್ಲ. ಅಸಲಿಗೆ ಇರೋದು 2 ಗಂಟೆ 37 ನಿಮಿಷ ವೀಡಿಯೋ ಮಾತ್ರ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಹಾಸನದ ನನ್ನ ಗೃಹ ಕಚೇರಿಯಲ್ಲಿ ಈ ಪೆನ್ ಡ್ರೈವ್ ಕೊಟ್ಟಿದ್ದ. ಎಸ್ಐಟಿಗೆ ನನ್ನ ಬಳಿ ಇರುವ ದಾಖಲೆ ಕೊಟ್ಟಿದ್ದೇನೆ. ಎಲ್ಲವನ್ನೂ ಅವರಿಗೆ ಕೊಟ್ಟಿದ್ದೇನೆ. ಆದರೆ, ಕಾಂಗ್ರೆಸ್ ಸರ್ಕಾರ ನಿಜವಾದ ಆರೋಪಿಗಳನ್ನು ಬಚ್ಚಿಟ್ಟುಕೊಂಡಿದೆ. ಸಂತೃಸ್ತರಿಗೆ ಹಣ ಕೊಟ್ಟುಕರ್ಕೊಂಡು ಬಂದಿದ್ದಾರೆ. ಎಲ್ ಆರ್ ಶಿವರಾಮೇಗೌಡರನ್ನು ಮಧ್ಯವರ್ತಿಯಾಗಿ ಕಳುಹಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಬಿಐಗೆ ವಹಿಸಬೇಕು, ನಾನು ಎಲ್ಲಾ ದಾಖಲೆ ಕೊಡುತ್ತೇನೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments