Publish Date: Sat, 02 Feb 2019 (15:48 IST)
Updated Date: Sat, 02 Feb 2019 (15:55 IST)
ಕೈ ಶಾಸಕರ ಬಡಿದಾಟದಲ್ಲಿ ಗಾಯಗೊಂಡಿರುವ ಶಾಸಕ ಆನಂದ್ ಸಿಂಗ್ ತಾವು ಯಾವುದೇ ಕಾರಣಕ್ಕೂ ಶಾಸಕ ಗಣೇಶ್ ಜತೆ ರಾಜೀ ಆಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಬಿಡದಿಯ ಈಗಲ್ ಟನ್ ರೆಸಾರ್ಟನಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿರುವ ಶಾಸಕ ಆನಂದ ಸಿಂಗ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾನು ರಾಜಿ ಮಾಡಿಕೊಳ್ಳುವುದಿಲ್ಲ. ಕಾನೂನು ಅವರ ಮೇಲೆ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರು ಬಿಡದಿಯಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಈ ಹಿಂದೆ ಒಗ್ಗಟ್ಟು ಪ್ರದರ್ಶಿಸಲು ಉಳಿದುಕೊಂಡಿದ್ದರು.
ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿದ ನಂತರ ಕೈ ಶಾಸಕರು ಪಾರ್ಟಿ ಮಾಡಿದ್ದು, ಆ ವೇಳೆ, ಶಾಸಕ ಗಣೇಶ್ ಕೋಪಗೊಂಡು ಬಾಟಲ್ ನಿಂದ ಆನಂದ್ ಸಿಂಗ್ ತಲೆಗೆ ಹೊಡೆದಿದ್ದಾರೆ. ಪರಿಣಾಮ ಆನಂದ್ ಸಿಂಗ್ ಅವರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.