Webdunia - Bharat's app for daily news and videos

Install App

ನನಗೆ ಜೀವ ಬೆದರಿಕೆಯಿದೆ, ಎಲ್ಲಾ ಡಿಕೆ ಶಿವಕುಮಾರ್, ಸುರೇಶ್, ಕುಸುಮಾ ಕೆಲಸ: ಮುನಿರತ್ನ

Krishnaveni K
ಬುಧವಾರ, 25 ಡಿಸೆಂಬರ್ 2024 (13:32 IST)
ಬೆಂಗಳೂರು: ಇಂದು ಆರ್ ಆರ್ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ, ಕಲ್ಲು ಎಸೆದು ದಾಳಿ ಮಾಡಲಾಗಿದೆ. ಇದಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ನನಗೆ ಜೀವ ಬೆದರಿಕೆಯಿದೆ ಎಂದಿದ್ದಾರೆ.

ಕಳೆದ ಕೆಲವು ದಿನಗಳಿಂದ ನನಗೆ ಜೀವ ಬೆದರಿಕೆಯಿದೆ. ಕೋರ್ಟ್ ಗೆ ಹೋಗಿದ್ದಾಗ ಲಾಯರ್ ರೂಪದಲ್ಲಿ ಒಬ್ಬರು ಬಂದಿದ್ದವರು ಇದೇ ಮಾತನ್ನು ಹೇಳಿದ್ದರು. ನಾನು ಹೊರಗೆ ಬರುವಂತೆಯೇ ಇಲ್ಲ. ಬಂದರೆ ಕೊಲೆಯಾಗಲಿದೆ ಎನ್ನುತ್ತಿದ್ದರು.

ಈವತ್ತೂ ಸಹ, ಸುಮಾರು 100 ಪೊಲೀಸರಿದ್ದರು. ಘಟನೆ ನಡೆದ ಬಳಿಕ ಪೊಲೀಸರೇ ನನಗೆ ಹೇಳಿದ್ದಾರೆ, ನನ್ನ ಕೊಲೆ ಪ್ರಯತ್ನವಾಗುತ್ತದೆ ಎಂದು ಮಾಹಿತಿಯಿತ್ತು ಎಂದು. ಇದರ ಬಗ್ಗೆ ಯಾರಿಗೂ ಹೇಳಬೇಡಿ ಎಂದೂ ಹೇಳಿದ್ದರು. ಇದೆಲ್ಲಾ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಮತ್ತು ಕುಸುಮಾ ರವಿ ಕುಮ್ಮಕ್ಕಿನಿಂದಲೇ ನಡೆಯುತ್ತಿರುವುದು ಎಂದು ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

ನನ್ನ ರಾಜೀನಾಮೆಗೆ ಹಲವು ದಿನಗಳಿಂದ ಒತ್ತಡ ಕೇಳಿಬರುತ್ತಿದೆ. ರಾಜೀನಾಮೆ ಕೊಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯನವರಿಗೆ ಹೇಳಿ ಏನೂ ಉಪಯೋಗವಿಲ್ಲ. ಹೀಗಾಗಿ ನನಗೆ ಏನೇ ಆದರೂ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಸೇರಿದಂತೆ ಕೆಲವು ನಾಯಕರೇ ಕಾರಣ ಎಂದು ಈಗಾಗಲೇ ಪ್ರಧಾನ ಮಂತ್ರಿಗಳಿಗೆ, ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದೇನೆ ಎಂದು ಮುನಿರತ್ನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments