ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ

Webdunia
ಶನಿವಾರ, 30 ಏಪ್ರಿಲ್ 2022 (20:40 IST)
ಪಂಜಾಬ್ ನ ಪಟಿಯಾಲದಲ್ಲಿ ಶಿವಸೇನೆ ಮತ್ತು ಖಲಿಸ್ಥಾನ ಬೆಂಬಲಿಗರ ನಡುವೆ ಶುಕ್ರವಾರ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ತಹಬದಿಗೆ ತರಲು ತಾತ್ಕಾಲಿಕವಾಗಿ ಮೊಬೈಲ್ ಮತ್ತು ಇಂಟರ್​​ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಂಜಾಬ್ ಗೃಹ ಇಲಾಖೆ ಘೋಷಿಸಿದೆ. ಪಟಿಯಾಲಾದಲ್ಲಿ ಇಂದು ಬೆಳಗ್ಗೆ 9-30ರಿಂದ ರಾತ್ರಿ 9ರವರೆಗೆ ಇಂಟರ್ನೆಟ್ ಸರ್ವೀಸ್ ಸ್ಥಗಿತಗೊಳಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಪಟಿಯಾಲಾದಲ್ಲಿ ಶಿವಸೇನೆ ಮತ್ತು ಖಲಿಸ್ಥಾನ ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿತ್ತು. ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಟಿಯಾಲಾ ವಲಯದ ಐಜಿಪಿ ರಾಕೇಶ್ ಅಗರ್ವಾಲ್ ತಿಳಿಸಿದ್ದರು. ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಟಿಯಾಲಾ ಡೆಪ್ಯುಟಿ ಕಮಿಷನರ್  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಮುಂದಿನ ಸುದ್ದಿ
Show comments