Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.
ಇತ್ತ ನವೀನ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿತ್ತು. ಪೋಷಕರು ಹಾಗೂ ಕುಟುಂಬಸ್ಥರು ಮೃತದೇಹ ತಂದುಕೊಡುಂತೆ ಗೋಗರೆಯುತ್ತಿದ್ದರು. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿ ಮೃತದೇಹ ತರುವುದಾಗಿ ಭರವಸೆ ನೀಡಿದ್ದರು.