Webdunia - Bharat's app for daily news and videos

Install App

ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಕೊನೆಗೂ ಯಾವ ಸ್ಥಿತಿಯಲ್ಲಿ ಪತ್ತೆ ನೋಡಿ

Krishnaveni K
ಸೋಮವಾರ, 7 ಅಕ್ಟೋಬರ್ 2024 (12:16 IST)
ಮಂಗಳೂರು: ಕಣ್ಮರೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಕೊನೆಗೂ ಪತ್ತೆಯಾಗಿದೆ. ಸಹೋದರನ ಮೃತದೇಹ ನೋಡಿ ಮೊಯಿದ್ದೀನ್ ಬಾವಾ ಕುಟುಂಬ ಕಣ್ಣೀರು ಹಾಕಿದ್ದಾರೆ.

ಸತತ ಎರಡು ದಿನಗಳಿಂದ ಮುಮ್ತಾಜ್ ಅಲಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಸುಳಿವೇ ಸಿಕ್ಕಿರಲಿಲ್ಲ.ಇದರಿಂದ ಕುಟುಂಬಸ್ಥರು ಕಂಗೆಟ್ಟಿದ್ದರು. ಇದೀಗ ಮಂಗಳೂರಿನ ಕುಳೂರಿನ ಸೇತುವೆ ಬಳಿ ಮುಮ್ತಾಜ್ ಶವ ಪತ್ತೆಯಾಗಿದೆ. ಮುಳುಗು ತಜ್ಞರು ಸತತ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆಯುವಲ್ಲಿ ಸಫಲರಾಗಿದ್ದಾರೆ.

ನಿನ್ನೆ ಮಂಗಳೂರಿನ ಕುಳೂರು ಸೇತುವೆ ಬಳಿ ಮುಮ್ತಾಜ್ ಕಾರು ಪತ್ತೆಯಾಗಿತ್ತು. ಹೀಗಾಗಿ ಇದೇ ಸ್ಥಳದಲ್ಲಿ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಹುಡುಕಾಟ ನಡೆಸಲಾಗಿತ್ತು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ನಡೆಸಿ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರು.

ಭಾನುವಾರ ಬೆಳಿಗ್ಗೆ ಮೊಯಿದ್ದೀನ್ ಬಾವಾ ಸಹೋದರ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದರು. ಅವರ ಬಿಎಂಡಬ್ಲ್ಯು ಕಾರು ಕುಳೂರು ಸೇತುವೆ ಬಳಿ ಪತ್ತೆಯಾಗಿದ್ದರಿಂದ ಅವರು ನದಿಗೆ ಹಾರಿರಬಹುದು ಎಂದು ಶಂಕಿಸಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಮಹಿಳೆಯ ಕೈವಾಡವಿರುವ ಬಗ್ಗೆಯೂ ಸುದ್ದಿ ಕೇಳಿಬರುತ್ತಿದೆ. ಖಾಸಗಿ ವಿಡಿಯೋ ಇಟ್ಟುಕೊಂಡು ಮಹಿಳೆಯೊಬ್ಬರು ಮುಮ್ತಾಜ್ ಗೆ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments