Webdunia - Bharat's app for daily news and videos

Install App

ಆಸ್ತಿಯಲ್ಲಿ ಪಾಲು ಕೊಡದ ಅತ್ತೆ- ಮಾವ: ರೊಚ್ಚಿಗೆದ್ದ ಸೊಸೆಯಿಂದ ಅಡಿಕೆ ಸಸಿಗಳ ನೆಲಸಮ

Sampriya
ಮಂಗಳವಾರ, 9 ಏಪ್ರಿಲ್ 2024 (14:20 IST)
Photo Courtesy Facebook
ದಾವಣಗೆರೆ: ತಾಲ್ಲೂಕಿನ ಅವರಗೊಳ್ಳ ಗ್ರಾಮದಲ್ಲಿ ಅತ್ತೆ-ಮಾವನ ಮೇಲಿನ‌ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ಕಡಿದು ಹಾಕಿರುವ ಘಟನೆ ನಡೆದಿದೆ.

ಚಿದಾನಂದಸ್ವಾಮಿ, ಶಿವನಾಗಮ್ಮ ದಂಪತಿಯ ಹಿರಿಯ ಪುತ್ರ ಕುಮಾರಸ್ವಾಮಿ ಅವರ ಪತ್ನಿ ರೂಪಾ ಕೆಲ ವರ್ಷಗಳಿಂದ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದಳು. ಈ ವಿಚಾರದಲ್ಲಿ ಹಲವು ಬಾರಿ ಜಗಳ ನಡೆದಿತ್ತು.

ತಮಗೆ ಸೇರಬೇಕಿದ್ದ ಆಸ್ತಿಯಲ್ಲಿ ಪಾಲು ಕೊಡಲು ಅತ್ತೆ-ಮಾವ ಹಿಂದೇಟು ಹಾಕುತ್ತಿದ್ದಾರೆ ಎಂದು ರೊಚ್ಚಿಗೆದ್ದ ರೂಪಾ ಅಡಿಕೆ ಸಸಿಗಳನ್ನು ನೆಲಸಮ ಮಾಡಿದ್ದಾಳೆ. ಎಲ್ಲ ಸಸಿಗಳನ್ನು ಮೂರು ವರ್ಷಗಳ ಹಿಂದೆ ನಡೆಲಾಗಿತ್ತು.

ರೂಪಾ ನಮ್ಮನ್ನು ಸರಿಯಾಗಿ ನೋಡಿಕೊಳ್ಳದೆ, ಹಲ್ಲೆ ಮಾಡುತ್ತಿದ್ದಾಳೆ. ನಮ್ಮ ಬಳಿ 8 ಲಕ್ಷ ರೂಪಾಯಿ ‌ಪಡೆದು ಮನೆ ಕಟ್ಟಿಸಿಕೊಂಡಿದ್ದಾಳೆ ಎಂದು ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ರೂಪಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments