Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಿದ್ದರಾಮಯ್ಯ ಪಿಎಫ್ ಐ ಜೊತೆಗೆ ಆರ್ ಎಸ್ ಎಸ್ ಬ್ಯಾನ್ ಮಾಡಬೇಡ ಎನ್ನುವ ಹೇಳಿಕೆ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ ಎನ್ ಬಚ್ಚೇಗೌಡ ಹೇಳಿಕೆ ಕೊಟ್ಟಿದ್ದಾರೆ.
ಆರ್ ಎಸ್ ಎಸ್ ಒಂದು ಸೇವಾ ಸಂಘಟನೆ ಹಾಗಾಗಿ ಅದನ್ನು ಬ್ಯಾನ್ ಮಾಡುವ ಅವಶ್ಯಕತೆ ಇಲ್ಲ .1925 ರಿಂದ ರಾಷ್ಟ್ರೀಯ ಸೇವಾ ಸಮಿತಿ ಸೇವಾ ಮನೋಭಾವದಿಂದ ಆರಂಭ ಮಾಡಿದೆ .ರಾಷ್ಟ್ರ ದ್ರೋಹಿ ಕೆಲಸ ಮಾಡುವ ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳನ್ನ ಬ್ಯಾನ್ ಮಾಡಿರೋದು ಸ್ವಾಗತಾರ್ಹ .ಬಿಜೆಪಿ ಸರ್ಕಾರ ಇಷ್ಟು ವರ್ಷಗಳ ನಂತರ ಒಳ್ಳೆಯ ಕೆಲಸ ಮಾಡಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ಹೇಳಿದ್ದಾರೆ.