ತಮ್ಮವರೇ 15 ಸಚಿವರ ವಿರುದ್ದವೇ ದೂರು ಕೊಟ್ಟ ಎಂಪಿ ರೇಣುಕಾಚಾರ್ಯ

Webdunia
ಭಾನುವಾರ, 30 ಜನವರಿ 2022 (20:39 IST)
15ಕ್ಕೂ ಹೆಚ್ಚು ಸಚಿವರು ಬಿಜೆಪಿ ಶಾಸಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ. ಶಾಸಕರ ದೂರವಾಣಿ ಕರೆಗಳನ್ನೂ ಸ್ವೀಕರಿಸುವುದಿಲ್ಲ ಎಂದು ದೂರಿ ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ದೂರು ಸಲ್ಲಿಸಿದ್ದಾರೆ.
ಹೌದು, ಸಿಎಂ ಬೊಮ್ಮಾಯಿ ಮತ್ತು ಕಟೀಲ್‌ ಅವರನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿರುವ ರೇಣುಕಾಚಾರ್ಯ, ‘ಕೆಲವು ಸಚಿವರು ತಮ್ಮಿಂದಲೇ ಈ ಸರ್ಕಾರ ಬಂದಿದೆ ಎಂಬ ದುರಹಂಕಾರದ ವರ್ತನೆ ಪ್ರದರ್ಶಿಸುತ್ತಿದ್ದು, ಖುದ್ದಾಗಿ ಭೇಟಿಮಾಡಿ ಪತ್ರಗಳನ್ನು ನೀಡಿದರೆ, ಆಪ್ತ ಸಹಾಯಕರಿಂದ ಸಹಿ ಮಾಡಿಸಿ ಅಧಿಕಾರಿಗಳಿಗೆ ನೀಡುತ್ತಾರೆ.
ಇನ್ನು, ಸಚಿವರ ಆಪ್ತ ಕಾರ್ಯದರ್ಶಿಗಳೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ. ಅಂತಹ ಸಚಿವರಿಗೆ ತಿಳಿ ಹೇಳಿ, ಪಕ್ಷದ ಶಾಸಕರಿಗೆ ಸ್ಪಂದಿಸುವಂತೆ ತಾಕೀತು ಮಾಡಬೇಕು ಎಂದು ಕೋರಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ನಿನ್ನೆ ಕೆಟ್ಟು ನಿಂತ ನೇರಳೆ ಮಾರ್ಗದ ನಮ್ಮ ಮೆಟ್ರೋದಲ್ಲಿ ಇಂದು ಪ್ರಯಾಣಿಸಬಹುದೇ, ಇಲ್ಲಿದೆ ಮಾಹಿತಿ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಮುಂದಿನ ಸುದ್ದಿ
Show comments