Publish Date: Sun, 04 Sep 2022 (07:57 IST)
Updated Date: Sun, 04 Sep 2022 (09:38 IST)
ಚಿತ್ರದುರ್ಗ : ಪೋಕ್ಸೋ ಕೇಸಲ್ಲಿ ಶುಕ್ರವಾರದಿಂದ ಪೊಲಿಸ್ ಕಸ್ಟಡಿಯಲ್ಲಿ ಇರುವ ಮುರುಘಾ ಶ್ರೀಗಳನ್ನು ಇಂದು ತನಿಖಾ ತಂಡ ವಿಚಾರಣೆಗೆ ಒಳಪಡಿಸಿದೆ. ಆದರೆ ಶ್ರೀಗಳು ವಿಚಾರಣೆಗೆ ಸಹಕರಿಸ್ತಿಲ್ಲ ಎನ್ನಲಾಗಿದೆ.
ಎಲ್ಲಾ ರೀತಿಯ ಆರೋಪಗಳನ್ನು ಸ್ವಾಮೀಜಿ ತಳ್ಳಿ ಹಾಕಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ್ಯ ನಡೆದಿದೆ ಎಂದು ಆರೋಪ ಮಾಡಿದ್ದಾರೆ.
ವಿಚಾರಣೆ ಮಧ್ಯೆ ಶ್ರೀಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಪೊಲೀಸರು ಇಸಿಜಿ, ಎಕೋ ಸೇರಿ ಹಲವು ಟೆಸ್ಟ್ ಮಾಡಿಸಿದ್ರು. ಜೊತೆಗೆ ಸ್ವಾಮೀಜಿಗಳ ಉಗುರು, ಕೂದಲು ಸಂಗ್ರಹಿಸಿದರು. ಈ ನಡುವೆ ಶ್ರೀಗಳ ಪುರುಷತ್ವ ಪರೀಕ್ಷೆ ಫಲಿತಾಂಶ, ಪಾಸಿಟೀವ್ ಎಂದು ಬಂದಿದೆ.
ಶ್ರೀಗಳ ಜಾಮೀನು ಪ್ರಯತ್ನಕ್ಕೆ ಕೋರ್ಟ್ನಲ್ಲಿ ಹಿನ್ನಡೆ ಆಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿಯೋವರೆಗೂ ಜಾಮೀನು ಅರ್ಜಿ ಸಲ್ಲಿಸದಂತೆ ಕೋರ್ಟ್ ಸೂಚಿಸಿದೆ. ಪ್ರಕರಣದ ಎ3, ಎ4, ಎ5 ಆರೋಪಿಗಳು ನಾಪತ್ತೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಿರೀಕ್ಷಣಾ ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರು ಸೋಮವಾರದವರೆಗೆ ಸಮಯ ಪಡೆದಿದ್ದಾರೆ.