ಬಿಜೆಪಿ ಬಿಟ್ಟು ಬೇರೆ ಪಕ್ಷ ಹೋಗಲ

Webdunia
ಮಂಗಳವಾರ, 25 ಜನವರಿ 2022 (16:07 IST)
ಬೆಂಗಳೂರು ಗ್ರಾಮಾಂತರ ಇದ್ದಿದ್ರೆ ಚೆನ್ನಾಗಿ ಇತ್ತು. ನಾನು ಜನರಿಂದ ಗೆದ್ದು ಬಂದಿಲ್ಲ. ಪರಿಷತ್​ಗೆ ಎಂಎಲ್​ಸಿ ಆಗಿ ಆಯ್ಕೆಯಾಗಿ ಬಂದದ್ದು. ಮುಂದಿನ ಚುನಾವಣೆಗಾಗಿ ನಾನು ಅಲ್ಲೇ ಇದ್ದು ಕೆಲಸ ಮಾಡಿದ್ರೆ ಚೆನ್ನಾಗಿ ಇತ್ತು. ನನ್ನ ಮನಸ್ಸಿನಲ್ಲಿ ಇದ್ದದ್ದು ನಾನು ಸಿಎಂ ಬಳಿ ಹೇಳಿದ್ದೇನೆ..
ಪಾರ್ಟಿ ಬಿಟ್ಟು ಮನೆಗೆ ಹೋಗ್ತಿನಿ. ಆದರೆ, ಬೇರೆ ಪಾರ್ಟಿಗೆ ಹೋಗಲ್ಲ. ಇದೇ ಪಕ್ಷದಲ್ಲೇ ಇದ್ದು, ಜನರ ಸೇವೆ ಮಾಡುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.
 
ಮತ್ತೆ ಬೇರೆ ಪಾರ್ಟಿ ಸೇರೋದಿಲ್ಲ ಅಂತಾ ಸ್ಪಷ್ಟನೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರು..
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಲವರು ಕಾಂಗ್ರೆಸ್‌ಗೆ ಹೋಗ್ತಾರೆ ಅನ್ನೋ ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅವರಿಗೆ ಮಾಹಿತಿ ಇದ್ರೂ ಇರಬಹುದು. ನನಗೆ ಗೊತ್ತಿಲ್ಲ. ಪಾರ್ಟಿ ಬಿಟ್ಟು ಮನೆಗೆ ಹೋಗ್ತಿನಿ.
 
ಆದರೆ, ಬೇರೆ ಪಾರ್ಟಿಗೆ ಹೋಗಲ್ಲ. ನಾನು ಯಾವ ದೇವರ ಮೇಲೆ ಆದರೂ ಪ್ರಮಾಣ ಮಾಡುತ್ತೇನೆ. ಈವರೆಗೂ ನಾನು ಕಾಂಗ್ರೆಸ್​ನ ಯಾವುದೇ ನಾಯಕರ ಜೊತೆ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ಮಾಡಿದ್ದೇನೆ. ಸಿದ್ದರಾಮಯ್ಯ ನಿನ್ನೆ ಬಾದಾಮಿಯಿಂದ ಕರೆ ಮಾಡಿದ್ರು. ಅಧಿಕಾರಿಗಳ ನೇಮಕ ಸಂಬಂಧ ಚರ್ಚೆ ಮಾಡಿದ್ರು. ಹಾಗಂತಾ, ಬೇರೆ ಯಾವುದೇ ವಿಷಯಗಳ ಬಗ್ಗೆ ಚರ್ಚೆ ಮಾಡಿಲ್ಲ ಎಂದರು.
 
ಜಿಲ್ಲಾ ಉಸ್ತುವಾರಿ ಸಚಿವರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು, ವರಿಷ್ಠರ ತೀರ್ಮಾನಕ್ಕೆ ನನ್ನ ಸಹಮತ ಇದೆ. ಇಷ್ಟು ದಿನ ಬೆಂಗಳೂರು ಗ್ರಾಮಾಂತರ ಇತ್ತು. ಈಗ ಚಿಕ್ಕಬಳ್ಳಾಪುರ ನೀಡಿದ್ದಾರೆ. ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ನೀಡಿದ್ದಾರೆ. ಯಾಕೆ ಬದಲಾವಣೆ ಮಾಡಿದ್ದಾರೆ ಅಂತಾ ಕಾರಣಗಳು ನನಗೂ ಗೊತ್ತಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments