Webdunia - Bharat's app for daily news and videos

Install App

10ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುಡಾ ಆಯುಕ್ತ

Sampriya
ಶುಕ್ರವಾರ, 22 ನವೆಂಬರ್ 2024 (20:05 IST)
ಬೀದರ್: 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ  ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಲೋಕಾಯುಕ್ತ ಪೊಲೀಸರ ದಾಳಿ ವೇಳೆ ಬಲೆಗೆ ಬಿದ್ದಿದ್ದಾರೆ.

ಈ ಸಂಬಂಧ ಕೃಷಿಯೇತರ ಜಮೀನಿನ(ಎನ್‌.ಎ) ನಿವೇಶನಗಳ ಮಾರಾಟದ ಅನುಮತಿಗಾಗಿ 10 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ, ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಹಾಗೂ ಅವರ ಆಪ್ತ ಸಿದ್ದು ಹೂಗಾರ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆದು ತನಿಖೆ ನಡೆಸುತ್ತಿದ್ದಾರೆ.

ಬೀದರ್ ನಗರದ ಚಿಕ್ಕಪೇಟೆಯಲ್ಲಿರುವ ಸರ್ವೇ ನಂಬರ್ 26ರಲ್ಲಿ ಕೃಷಿಯೇತರ ಜಮೀನಿನ ಶೇ. 60 ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಮತ್ತು ಮಾರಾಟಕ್ಕೆ ಅನುಮತಿ ನೀಡಲು ಬುಡಾ ಆಯುಕ್ತ ಶ್ರೀಕಾಂತ್ ಹಾಗೂ ಚಂದ್ರಕಾಂತ್ ಅವರು 50 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಇಂದು 10 ಲಕ್ಷ ರೂಪಾಯಿ ಇವರಿಗೆ ಮುಂಗಡ ಪಡೆಯುತ್ತಿದ್ದ ವೇಳೇ ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ಸತೀಶ್ ನೌಬಾದೆ ಅವರ ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments