Webdunia - Bharat's app for daily news and videos

Install App

ರಾಜಿ ಸಂಧಾನಕ್ಕೆ ಹೋಗಿದ್ದ ವ್ಯಕ್ತಿಯ ಕೊಲೆ

Webdunia
ಮಂಗಳವಾರ, 29 ನವೆಂಬರ್ 2022 (13:49 IST)
ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಆತನ ಸಂಬಂಧಿಕರು ಹಲ್ಲೆ ನಡೆಸಿ ಕೊಂದಿರುವ ಘಟನೆ ಜೆ.ಜೆ.ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಜೆ.ಜೆ.ನಗರದ ನಿವಾಸಿ ಇಮಾಯೂನ್‌ ಮೃತ ದುರ್ದೈವಿ.  ಮೃತನ ಸಂಬಂಧಿಕರಾದ ಸೈಯದ್‌ ಫೈಸಲ್‌ ಹಾಗೂ ಸೈಯದ್‌ ಅಸ್ಮತ್‌ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಕೌಟುಂಬಿಕ ವಿಚಾರವಾಗಿ ಜಾವೀದ್‌ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಈ ಹಿನ್ನಲೆಯಲ್ಲಿ ದಂಪತಿ ಮಧ್ಯೆ ರಾಜಿ ಸಂಧಾನ ಸಲುವಾಗಿ ಜಾವೀದ್‌ಗೆ ಮನೆಗೆ ಆತನ ಪತ್ನಿ ಮುಸ್ಕಾನ್‌ ಸೋದರರು ಬಂದಿದ್ದರು. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಇಮಾಯೂನ್‌ ಮೇಲೆ ಸೈಯದ್‌ ಫೈಸಲ್‌ ಹಲ್ಲೆ ನಡೆಸಿದ್ದಾನೆ. ಎದೆಗೆ ಗಂಭೀರ ಪೆಟ್ಟಾಗಿ ಆತ ಕುಸಿದು ಬಿದ್ದಿದ್ದಾನೆ. ಕೂಡಲೇ ಇಮಾಯೂನ್‌ನನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ. ಜೆ.ಜೆ.ನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments