Webdunia - Bharat's app for daily news and videos

Install App

ವಕ್ಫ್ ಬೋರ್ಡ್ ತಿದ್ದುಪಡಿ ವಿರೋಧಿಸಲು ಸಿದ್ದರಾಮಯ್ಯಗೆ ಮನವಿ ಮಾಡಿದ ಮುಸ್ಲಿಂ ನಾಯಕರು

Krishnaveni K
ಶನಿವಾರ, 31 ಆಗಸ್ಟ್ 2024 (15:16 IST)
ಬೆಂಗಳೂರು: ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ವಕ್ಫ್ ಬೋರ್ಡ್ ತಿದ್ದುಪಡಿ ಕಾಯ್ದೆಯ ವಿರುದ್ಧ ಧ್ವನಿಯೆತ್ತುವಂತೆ ಇಂದು ಮುಸ್ಲಿಂ ಧರ್ಮ ಗುರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಕಳೆದ ಬಾರಿ ಲೋಕಸಭೆ ಕಲಾಪದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡಿಸಿತ್ತು. ಆದರೆ ಇದಕ್ಕೆ ಮಿತ್ರ ಪಕ್ಷಗಳಿಂದಲೇ ವಿರೋಧ ವ್ಯಕ್ತವಾಗಿದ್ದರಿಂದ ಇದರ ಬಗ್ಗೆ ವಿಚಾರ ಮಾಡಿಯೇ ಮುಂದುವರಿಯಲು ತೀರ್ಮಾನಿಸಿತ್ತು. ಆದರೆ ಈ ಮಸೂದೆಯನ್ನು ಜಾರಿಗೆ ತರುವ ಉದ್ದೇಶ ಕೇಂದ್ರ ಸರ್ಕಾರಕ್ಕಿದೆ.

ಹೀಗಾಗಿ ಇಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಧರ್ಮಗುರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆ-2024 ರ ಕುರಿತಂತೆ ತಮ್ಮ ಕಾಳಜಿಗಳನ್ನು ವ್ಯಕ್ತಪಡಿಸಿ ಮನವಿ ಸಲ್ಲಿಸಿತು. ಈ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡಾ ಇದ್ದರು.

ಈಗಾಗಲೇ ಸಿಎಂ ಸಿದ್ದರಾಮಯ್ಯ ವಕ್ಫ್ ಬೋರ್ಡ್ ತಿದ್ದುಪಡಿ ನಿಯಮಾವಳಿ ವಿಚಾರವಾಗಿ ತಮ್ಮ ನಿಲುವು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು. ಇದು ಮುಸ್ಲಿಮರ ವೈಯಕ್ತಿಕ ವಿಚಾರವಾಗಿದ್ದು ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೈ ಹಾಕಬಾರದು ಎಂದು ಅಭಿಪ್ರಾಯಪಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments