Webdunia - Bharat's app for daily news and videos

Install App

ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ : ರೇಣುಕಾಚಾರ್ಯ

Webdunia
ಗುರುವಾರ, 8 ಜೂನ್ 2023 (13:26 IST)
ದಾವಣಗೆರೆ : ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ ಎಂದು ಹೊನ್ನಾಳಿಯ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಂಡೀಷನ್ ಹಾಕದೇ ಗ್ಯಾರಂಟಿ ಯೋಜನೆ ಜಾರಿ ಮಾಡಿ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಜನರ ಕಿವಿಗೆ ಹೂವು ಇಡುವುದು ಸರಿಯಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಭರವಸೆಯನ್ನಾಗಿ ನೀಡಿ ಜನರನ್ನು ಮರಳು ಮಾಡಿದ್ದಾರೆ.

ಈಗ ಎಲ್ಲದಕ್ಕೂ ಷರತ್ತು ವಿಧಿಸುವುದು ಸರಿಯಲ್ಲ. ಚುನಾವಣೆಗೆ ಮುಂಚೆ ಷರತ್ತು ಹೇಳದೇ ಗ್ಯಾರಂಟಿ ಘೋಷಣೆ ಮಾಡಿದ್ದೀರಿ. ಈಗಲೂ ಕೂಡ ಯಾವುದೇ ಶರತ್ತು ಹಾಕದೇ ಯೋಜನೆ ಜಾರಿ ಮಾಡಿ ಎಂದು ಆಗ್ರಹಿಸಿದರು. 

ಕರೆಂಟ್ ಬಿಲ್, ಅನ್ನಭಾಗ್ಯ, ಬಸ್ ಪ್ರಯಾಣ ಎಲ್ಲದಕ್ಕೂ ಷರತ್ತು ಹಾಕುತ್ತಿದ್ದೀರಿ. ಕೊಟ್ಟು ಮಾತು ಉಳಿಸಿಕೊಳ್ಳಿ. ವಚನ ಭ್ರಷ್ಟರಾಗಬೇಡಿ. ಕೇಂದ್ರ ಸರ್ಕಾರ ಈಗ 5 ಕೆಜಿ ಅಕ್ಕಿ ಕೊಡುತ್ತಿದೆ. ಅದನ್ನ ಬಿಟ್ಟು ನೀವು 10 ಕೆಜಿ ಕೊಡಿ. ಗೃಹ ಲಕ್ಷ್ಮಿ ಯೋಜನೆ ಕೊಟ್ಟು ಅತ್ತೆ ಸೊಸೆಗೆ ಜಗಳ ತಂದಿಟ್ಟಿದ್ದೀರಿ. ಈಗಾಗಲೇ ಮನೆಗಳಲ್ಲಿ ಅತ್ತೆ-ಸೊಸೆ ಗಲಾಟೆ ಶುರುವಾಗಿದೆ. ಬಾಡಿಗೆ ಇದ್ದ ಮನೆಗೂ ಯಾವುದೇ ಷರತ್ತು ಇಲ್ಲದೆ ಕರೆಂಟ್ ಫ್ರೀ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments