Webdunia - Bharat's app for daily news and videos

Install App

ಮೈಸೂರಿನಲ್ಲಿ ನಡು ರಸ್ತೆಯಲ್ಲೇ ಕಾರಿನಿಂದ ದರೋಡೆ ಮಾಡ್ತಿದ್ದರೂ ತಡೆಯೋರೇ ಇಲ್ಲ: ವಿಡಿಯೋ

Krishnaveni K
ಸೋಮವಾರ, 20 ಜನವರಿ 2025 (15:07 IST)
ಮೈಸೂರು: ಬೀದರ್, ಮಂಗಳೂರು ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಮೈಸೂರಿನಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಕಾರಿನಿಂದ ಉದ್ಯಮಿಯೊಬ್ಬರನ್ನು ಖದೀಮರು ದೋಚಿ ಪರಾರಿಯಾಗಿದ್ದಾರೆ.

ಮೈಸೂರು ಜಿಲ್ಲೆಯ ಹಾರೋಹಳ್ಳಿ ಬಳಿ ಘಟನೆ ನಡೆದಿದೆ. ಹಾಡಹಗಲೇ ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಕೇರಳ ಮೂಲದ ಉದ್ಯಮಿಯೊಬ್ಬರಿಂದ ನಗ-ನಗದು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಮುಖ ಮುಚ್ಚುವಂತೆ ಟೋಪಿ ಹಾಕಿಕೊಂಡು ಬಂದಿದ್ದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಬಾಗಿಲನ್ನು ಬಲವಂತವಾಗಿ ತೆಗೆಸಿ ಕೈಗೆ ಸಿಕ್ಕಿದ್ದುನ್ನು ಎಳೆದಾಡಿದ್ದಾರೆ. ವಿಶೇಷವೆಂದರೆ ಇಲ್ಲಿ ಬೇರೆ ವಾಹನಗಳು ಇದ್ದರೂ ಏನೂ ಮಾಡಲಾಗದ ಅಸಹಾಯಕತೆ ಎದುರಾಗಿದೆ. ಜನ ಕಿರುಚಾಡಿದರೂ ಯಾರೂ ಸಹಾಯಕ್ಕೆ ಬರುವ ಸ್ಥಿತಿಯಲ್ಲಿರಲಿಲ್ಲ.

ಹಣ ಕಳೆದುಕೊಂಡ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದಾರೆ. ಜೊತೆಗೆ ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸಾಕಷ್ಟು ಜನರ ನಡುವೆಯೇ ಈ ರೀತಿ ದರೋಡೆಕೋರರು ಸ್ವಲ್ಪವೂ ಭಯವಿಲ್ಲದೇ ದರೋಡೆ ನಡೆಸಿರುವುದು ನಿಜಕ್ಕೂ ಆತಂಕಕಾರೀ ವಿಚಾರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments