ಮೈಸೂರು ದಸರಾ ಮೆರವಣಿಗೆ ನಿರಾಕರಣೆ

Webdunia
ಭಾನುವಾರ, 25 ಸೆಪ್ಟಂಬರ್ 2022 (16:57 IST)
ಮೆರವಣಿಗೆ ನಡೆಸಲು ಪೊಲೀಸರಿಂದ ಅನುಮತಿ ನಿರಾಕರಿಸಿದ ಬೆನ್ನಿಗೇ ಅಶೋಕಪುರಂನಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಪಾರ್ಕ್‌ನಲ್ಲಿ ಮಹಿಷ ದಸರಾ ಆಚರಣೆ ಮಾಡಲಾಯಿತು.
 
ಕಾರ್ಯಕ್ರಮದಲ್ಲಿ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಸಾಹಿತಿ ಕೆ.ಎಸ್‌.ಭಗವಾನ್‌, ಪ್ರೊ.ಮಹೇಶ್ ಚಂದ್ರಗುರು, ಪ್ರೊ. ನಂಜರಾಜೆ ಅರಸ್‌, ಮಾಜಿ ಮೇಯರ್‌ ಪುರುಷೋತ್ತಮ್‌ ಸೇರಿ ಅನೇಕರು ಭಾಗವಹಿಸಿದ್ದರು.
 
ಮಹಿಷ ದಸರಾ ಹೋರಾಟ ಸಮಿತಿ ವತಿಯಿಂದ ಮೆರವಣಿಗೆಗೆ ಅನುಮತಿ ಕೋರಲಾಗಿತ್ತು. ಆದರೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ, ಪಾರ್ಕ್‌ನಲ್ಲೆ ಆಚರಣೆ ಮಾಡಲು ಸಮಿತಿ ನಿರ್ಧಾರ ಮಾಡಿತ್ತು. ಪಾರ್ಕ್‌ ಸುತ್ತ ಪೊಲೀಸರು ಬಿಗಿ ಬಂದೋಬಸ್ತ್‌ ಕಲ್ಪಿಸಿದ್ದರು.
 
ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಷಾಸುರನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಹಿಷ ದಸರಾ ಶುಭಾಶಯ ಕೋರಿದ ಜ್ವಾನಪ್ರಕಾಶ್ ಸ್ವಾಮೀಜಿ, ಸೋಮವಾರ ದಸರಾ ಆಚರಣೆ ನಡೆಸಲಾಗುವುದು. ದಸರಾ ಉದ್ಘಾಟನೆಗೆ ಹೋಗಬೇಕಾದರೆ ಮುಖಮಂತ್ರಿಗಳು ಯಾವ ಮಾರ್ಗದಲ್ಲಿ ತೆರಳುತ್ತಾರೆ? ಮಹಿಷನ ದರ್ಶನ ಪಡೆದೇ ಹೋಗಬೇಕು. ಆದರೂ ಮಹಿಷ ದಸರಾ ಆಚರಣಗೆ ತಡೆವೊಡ್ಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ
Show comments