Webdunia - Bharat's app for daily news and videos

Install App

Mysore: ಜಂಬೂ ಸವಾರಿಗೆ ಮಳೆ ಕಾಟ, ಕುರ್ಚಿ ತಲೆ ಮೇಲೆ ಹೊತ್ತು ನಿಂತ ಜನ

Krishnaveni K
ಶನಿವಾರ, 12 ಅಕ್ಟೋಬರ್ 2024 (15:02 IST)
ಮೈಸೂರು: ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದ್ದು, ಮೈಸೂರು ಅರಮನೆ ಮುಂಭಾಗ ಜಂಬೂ ಸವಾರಿ  ವೀಕ್ಷಿಸಲು ಸಾಕಷ್ಟು ಜನ ಸೇರಿದ್ದಾರೆ. ಆದರೆ ಜಂಬೂ ಸವಾರಿಗೆ ಈ ಬಾರಿ ಮಳೆ ಕಾಟ ಎದುರಾಗಿದೆ.

ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಇಂದು ಮೈಸೂರಿನಲ್ಲಿ ಜಂಬೂ ಸವಾರಿ, ಸ್ತಬ್ಧ ಚಿತ್ರ ಪ್ರದರ್ಶನ ಮಳೆಯ ನಡುವೆಯೇ ನಡೆಯುತ್ತಿದೆ. ಸ್ತಬ್ಧ ಚಿತ್ರ ವೀಕ್ಷಿಸಲು ಸಾಕಷ್ಟು ಜನ ಸೇರಿದ್ದರು. ಆದರೆ ಮಳೆಯಿಂದಾಗಿ ಎಂದಿನಂತೆ ಸುಗಮವಾಗಿ ವೀಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ.

ಕೈಗೆ ಸಿಕ್ಕ ಕುರ್ಚಿ, ವಸ್ತುಗಳನ್ನು ತಲೆಮೇಲೆ ಇಟ್ಟುಕೊಂಡು ಸ್ತಬ್ಧ ಚಿತ್ರ ಪ್ರದರ್ಶನ ವೀಕ್ಷಿಸುತ್ತಿದ್ದಾರೆ. ಇನ್ನು, ಮಳೆಯ ಕಾರಣಕ್ಕೆ ಬೇಗ ಬೇಗನೇ ಒಂದೊಂದು ಜಿಲ್ಲೆಯ ಸ್ತಬ್ಧ ಚಿತ್ರ ಸಾಗುತ್ತಿದೆ. ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸುವ ಮತ್ತು ಕನ್ನಡ ನಾಡಿನ ವಿವಿಧ ಸಂಸ್ಕೃತಿಯನ್ನು ಬಿಂಬಿಸುವ ಕಲಾಕೃತಿಗಳ ಸ್ತಬ್ಧ ಚಿತ್ರ ಪ್ರದರ್ಶನ ನಡೆಯುತ್ತಿದೆ.

ಇದಕ್ಕೂ ಮುನ್ನ ಇಂದು ಅರಮನೆಯಲ್ಲಿ ಸಾಂಪ್ರದಾಯಿಕವಾಗಿ ಆಯುಧ ಪೂಜೆ ನೆರವೇರಿತು. ರಾಜ ಯದುವೀರ್ ಒಡೆಯರ್ ರಾಜ ಪೋಷಾಕಿನಲ್ಲಿ ಪಟ್ಟದ ಕತ್ತಿ ಹಿಡಿದು ಆಯುಧ ಪೂಜೆ ನೆರವೇರಿಸಲು ಬಂದರು. ಜಂಬೂ ಸವಾರಿಯೊಂದಿಗೆ ನಾಡ ಹಬ್ಬಕ್ಕೆ ತೆರೆ ಬೀಳಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments