Webdunia - Bharat's app for daily news and videos

Install App

Mysore: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಕೋಪ, ಮಗನ ಎದುರಲ್ಲೇ ಪತಿ ಮಾಡಿದ್ದೇನು

Krishnaveni K
ಬುಧವಾರ, 22 ಜನವರಿ 2025 (10:13 IST)
ಮೈಸೂರು: ಪತ್ನಿ ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಪತಿ ಮಗನ ಎದುರಲ್ಲೇ ಆಕೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದದ ಧಾರುಣ ಘಟನೆ ಮೈಸೂರಿನ ಎಚ್ ಡಿ ಕೋಟೆ ತಾಲೂಕಿನ ಹನುಮಂತನಗರದಲ್ಲಿ ನಡೆದಿದೆ.

ಮಧುರ ಎಂಬ ಯುವತಿ ಪತಿಯ ಕ್ರೌರ್ಯಕ್ಕೆ ಒಳಗಾದವಳು.  ಇದೀಗ ಆಕೆ ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾಳೆ. ಈಕೆಯ ಮೇಲೆ ಪತಿ ನಿರಂತರವಾಗಿ ಹಿಂಸೆ ಮಾಡುತ್ತಲೇ ಇದ್ದ ಎಂದು ಈಗ ಕುಟುಂಬಸ್ಥರು ಆರಂಭಿಸಿದ್ದಾರೆ. ಪತಿ ಮಲ್ಲೇಶ್ ನಾಯ್ಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ಆರೇಳು ವರ್ಷಗಳಿಂದ ಮಲ್ಲೇಶ್ ನಾಯ್ಕ್ ನಿರಂತರವಾಗಿ ಆಕೆಗೆ ಕಿರುಕುಳ ನೀಡುತ್ತಿದ್ದ. ಆಕೆಯನ್ನು ಅನುಮಾನದಿಂದ ನೋಡುತ್ತಿದ್ದುದಲ್ಲದೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ತವರು ಮನೆಯಿಂದ ಹಣ, ಸೈಟು ಕೊಡಿಸುವಂತೆ ಪೀಡಿಸುತ್ತಿದ್ದ.

ಇತ್ತೀಚೆಗಷ್ಟೇ ಮಧುರಾ ಎರಡು ದಿನಗಳ ಮಟ್ಟಿಗೆ ತವರಿಗೆ ಹೋಗಿ ಬಂದಿದ್ದಳು. ಅದನ್ನೇ ನೆಪ ತೆಗೆದು ಜಗಳ ತೆಗೆದಿದ್ದಾನೆ. ಕೊನೆಗೆ ಮಗನ ಎದುರೇ ಬೆಂಕಿ ಹಚ್ಚಿದ್ದಾನೆ. ಪರಿಣಾಮ ಮಧುರಾ ತೀವ್ರ ಗಾಯಗೊಂಡಿದ್ದಾಳೆ. ಇದೀಗ ಗಂಭೀರ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುರಾ ತವರು ಮನೆಯವರು ಅಳಿಯ ಮಲ್ಲೇಶ್ ನಾಯ್ಕ್ ವಿರುದ್ಧ ದೂರು ನೀಡಿದ್ದಾರೆ. ಮಗಳ ಮೇಲೆ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದ. ನಮ್ಮ ಮಗಳು ಒಂದು ದಿನವೂ ಸಂತೋಷವಾಗಿರಲಿಲ್ಲ ಎಂದು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments