ಪಕ್ಕದ್ಮನೆ ಪ್ರಿಯಕರ ಜೊತೆಗೂಡಿ ಮರ್ಮಾಂಗಕ್ಕೆ ಹೊಡೆದು ಪತಿ ಕೊಂದ ಪತ್ನಿ!

Webdunia
ಸೋಮವಾರ, 19 ಜುಲೈ 2021 (17:48 IST)
ಕಾಫಿಯಲ್ಲಿ ಬೆರೆಸಿದ್ದ ನಿದ್ದೆ ಮಾತ್ರೆ ಸೇವಿಸಿ ನಿದ್ದೆಗೆ ಜಾರಿದ ಪತಿಯ ಮರ್ಮಾಂಗದ ಮೇಲೆ ಹಲ್ಲೆ ಮಾಡಿ ಕೊಂದ ಪ್ರಕರಣವನ್ನು 9 ತಿಂಗಳ ನಂತರ ಭೇದಿಸಿದ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸರು ಪ್ರಿಯಕರ ಹಾಗೂ ಪತ್ನಿಯನ್ನು ಬಂಧಿಸಿದ್ದಾರೆ.
ಪತ್ನಿ ಉಮಾ (29) ಹಾಗೂ ಪ್ರಿಯಕರ ಅವಿನಾಶ್ ಬಂಧಿತ ಆರೋಪಿಗಳು. ಮಂಡ್ಯ ಜಿಲ್ಲೆ ಹೊನಗಾನಹಳ್ಳಿ ಗ್ರಾಮದ ನಿವಾಸಿ ವೆಂಕಟರಾಜು (50) ಕೊಲೆಯಾದ ದುರ್ದೈವಿ.

ಅಕ್ಟೋಬರ್ 2020ರಂದು ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹುಣಸಗಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣದ ಬೆನ್ನು ಬಿದ್ದ ಪೊಲೀಸರು ಕೊಲೆಯ ಹಿಂದಿನ ಅಸಲಿಯತ್ತು ತಿಳಿದು ಬೆಚ್ಚಿಬಿದ್ದಿದ್ದಾರೆ.
ವೆಂಕಟರಾಜು 10 ವರ್ಷದ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ಬಳ್ಳೆಕರೆ ಗ್ರಾಮದ ನಿವಾಸಿ ಉಮಾಳನ್ನು ಮದುವೆಯಾಗಿದ್ದು, 8 ವರ್ಷದ ಒಂದು ಹೆಣ್ಣು ಮಗು 6 ವರ್ಷದ ಗಂಡು ಮಗುವಿದೆ. ವಯಸ್ಸಿನ ಅಂತರ ಹೆಚ್ಚಾಗಿ ಇದ್ದಿದ್ದರಿಂದ ಇಬ್ಬರ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು.
ಈ ವೇಳೆ ಉಮಾಗೆ ಪಕ್ಕದ ಮನೆಯ ನಿವಾಸಿ ಪರಿಚಯವಾಗಿದ್ದ ಅವಿನಾಶ್ ಪರಿಚಯವಾಗಿದ್ದ. ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಇಬ್ಬರು ಸೇರಿ ವೆಂಕಟರಾಜು ಕೊಲೆ ಮಾಡಲು ನಿರ್ಧರಿಸಿದ್ದಾರೆ.
ಅವಿನಾಶ್ ತನ್ನ ಅಜ್ಜಿ‌ ಮನೆ ಹುಣಸಗಳ್ಳಿಗೆ ವೆಂಕಟರಾಜುನನ್ನು ಕರೆಸಿಕೊಂಡಿದ್ದು, ಕಾಫಿಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಕುಡಿಸಿದ್ದು, ನಿದ್ರಾವಸ್ಥೆಯಲ್ಲಿದ್ದಾಗ ಖಾಸಗಿ ಭಾಗಕ್ಕೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಸ್ವಾಭಾವಿಕ ಸಾವು ಎಂಬಂತೆ ಪತ್ನಿ ಉಮಾ ನಾಟಕವಾಡಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕಲ್ಲು ಕ್ವಾರಿ ಭೀಕರ ದುರಂತ: ಲಾಭದ ಆಸೆಗೆ ಬಲಿಯಾದರೇ ಕಾರ್ಮಿಕರು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ಮುಂದಿನ ಸುದ್ದಿ
Show comments