Webdunia - Bharat's app for daily news and videos

Install App

ನಾಗಮಂಗಲ ಗಲಭೆಗೆ ಕುಮಾರಸ್ವಾಮಿಯೇ ಡೈರೆಕ್ಟರ್: ಡಿಕೆ ಸುರೇಶ್

Sampriya
ಶನಿವಾರ, 14 ಸೆಪ್ಟಂಬರ್ 2024 (16:24 IST)
Photo Courtesy X
ಬೆಂಗಳೂರು: ನಾಗಮಂಗಲ ಗಲಭೆ ವಿಚಾರವಾಗಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್, ಗಲಭೆಯನ್ನು ಕುಮಾರಸ್ವಾಮಿಯೇ ಮಾಡಿಸಿರಬಹುದು ಎಂದು ಕೌಂಟರ್ ಕೊಟ್ಟಿದ್ದಾರೆ.

ಮಾಧ್ಯಮಗಳ ಬಳಿ ಎಚ್‌ಡಿಕೆ ಮಾತನಾಡಿದಾಗ ಈ ಗಲಭೆಯನ್ನು ಕಾಂಗ್ರೆಸ್‌ನವರು ಮಾಡಿಸಿರಬಹುದು ಎಂದು ಹೇಳಿದ್ದರು. ಇದಕ್ಕೆ ಕೌಂಟರ್ ಕೊಟ್ಟ ಸುರೇಶ್ ಅವರು ಕುಮಾರಸ್ವಾಮಿ ನಿರ್ದೇಶನದಲ್ಲಿಯೇ ನಡೆದಿರಬಹುದು ಎಂದರು.

ಅಶಾಂತಿ ತರುವ ಉದ್ದೇಶದಿಂದ ಕುಮಾರಸ್ವಾಮಿ ಆಗಾಗ ಏನೇನೂ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ.  ಅದನ್ನು ನಾನು ಹೇಳಬಹುದಲ್ಲವೇ? ಅವರು ಏನು ರಾಜಕೀಯ ಆರೋಪ ಮಾಡುತ್ತಾರೆಯೋ ನಾನು ಸಹ ಅದೇ ರೀತಿ ಮಾಡುತ್ತೇನೆ ಎಂದು ಡಿಕೆ ಸುರೇಶ್ ಹೇಳಿದರು.

ಅಲ್ಪಸಂಖ್ಯಾತರ ಓಲೈಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಅವರು, ಕಾನೂನಿನ ಪ್ರಕಾರ ಎಲ್ಲರೂ ಒಂದೇ. ನಾವು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಕನಸು, ಬಸವಣ್ಣನವರ ತತ್ವಗಳು, ಅಂಬೇಡ್ಕರ್ ಅವರ ಆಶಯ, ಗಾಂಧೀಜಿಯವರ ಕನಸಿನ ಮೇಲೆ ಕಾಂಗ್ರೆಸ್ ನಡೆಯುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments