Webdunia - Bharat's app for daily news and videos

Install App

ನಾಗಮಂಗಲ ಗಲಭೆಗೆ ಕುಮಾರಸ್ವಾಮಿಯೇ ಡೈರೆಕ್ಟರ್: ಡಿಕೆ ಸುರೇಶ್

Sampriya
ಶನಿವಾರ, 14 ಸೆಪ್ಟಂಬರ್ 2024 (16:24 IST)
Photo Courtesy X
ಬೆಂಗಳೂರು: ನಾಗಮಂಗಲ ಗಲಭೆ ವಿಚಾರವಾಗಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್, ಗಲಭೆಯನ್ನು ಕುಮಾರಸ್ವಾಮಿಯೇ ಮಾಡಿಸಿರಬಹುದು ಎಂದು ಕೌಂಟರ್ ಕೊಟ್ಟಿದ್ದಾರೆ.

ಮಾಧ್ಯಮಗಳ ಬಳಿ ಎಚ್‌ಡಿಕೆ ಮಾತನಾಡಿದಾಗ ಈ ಗಲಭೆಯನ್ನು ಕಾಂಗ್ರೆಸ್‌ನವರು ಮಾಡಿಸಿರಬಹುದು ಎಂದು ಹೇಳಿದ್ದರು. ಇದಕ್ಕೆ ಕೌಂಟರ್ ಕೊಟ್ಟ ಸುರೇಶ್ ಅವರು ಕುಮಾರಸ್ವಾಮಿ ನಿರ್ದೇಶನದಲ್ಲಿಯೇ ನಡೆದಿರಬಹುದು ಎಂದರು.

ಅಶಾಂತಿ ತರುವ ಉದ್ದೇಶದಿಂದ ಕುಮಾರಸ್ವಾಮಿ ಆಗಾಗ ಏನೇನೂ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ.  ಅದನ್ನು ನಾನು ಹೇಳಬಹುದಲ್ಲವೇ? ಅವರು ಏನು ರಾಜಕೀಯ ಆರೋಪ ಮಾಡುತ್ತಾರೆಯೋ ನಾನು ಸಹ ಅದೇ ರೀತಿ ಮಾಡುತ್ತೇನೆ ಎಂದು ಡಿಕೆ ಸುರೇಶ್ ಹೇಳಿದರು.

ಅಲ್ಪಸಂಖ್ಯಾತರ ಓಲೈಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಅವರು, ಕಾನೂನಿನ ಪ್ರಕಾರ ಎಲ್ಲರೂ ಒಂದೇ. ನಾವು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಕನಸು, ಬಸವಣ್ಣನವರ ತತ್ವಗಳು, ಅಂಬೇಡ್ಕರ್ ಅವರ ಆಶಯ, ಗಾಂಧೀಜಿಯವರ ಕನಸಿನ ಮೇಲೆ ಕಾಂಗ್ರೆಸ್ ನಡೆಯುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments