Webdunia - Bharat's app for daily news and videos

Install App

ನಮ್ಮ ಮೆಟ್ರೋ ಕೊರೊನಾ ಸ್ಫೋಟ

Webdunia
ಗುರುವಾರ, 13 ಜನವರಿ 2022 (14:21 IST)
ನಮ್ಮ ಮೆಟ್ರೋ' ಸಿಬ್ಬಂದಿಗೂ ಕೊರೊನಾ ಬಿಸಿ ತುಸು ಜೋರಾಗಿಯೇ ತಟ್ಟಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೇಂದ್ರ ಕಚೇರಿಯ ಸುಮಾರು 40 ಸಿಬ್ಬಂದಿಯಲ್ಲಿ ಬುಧವಾರ ಸೋಂಕು ಪತ್ತೆಯಾಗಿದೆ. ಗುರುವಾರ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ!
ದಿನಗಳಲ್ಲಿ ಅಂದಾಜು 240ಕ್ಕೂ ಅಧಿಕ ಸಿಬ್ಬಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ 40 ಜನರಲ್ಲಿ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಇದರಲ್ಲಿ ಅಟೆಂಡರ್‌ನಿಂದ ಹಿಡಿದು ವಿವಿಧ ಹಂತದ ಎಂಜಿನಿಯರ್‌ಗಳು, ಅಧಿಕಾರಿಗಳು ಒಳ ಗೊಂಡಂತೆ ಎಲ್ಲ ಪ್ರಕಾರದ ನೌಕರರೂ ಇದ್ದಾರೆ. ಅವರೆಲ್ಲರೂ ಈಗ ಮನೆಗಳಲ್ಲೇ ಐಸೋಲೇಷನ್‌ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಬುಧವಾರ ಮತ್ತೆ 140ಕ್ಕೂ ಅಧಿಕ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿದೆ. ಇದರ ವರದಿಯನ್ನು ಗುರುವಾರ ಬರುವ ನಿರೀಕ್ಷೆ ಇದೆ. ಅದರಲ್ಲಿಯೂ ಒಂದು ವೇಳೆ ಸೋಂಕಿ ತರು ಕಂಡುಬಂದರೆ, ಅವರನ್ನೂ ಐಸೋಲೇಷನ್‌ಗೆ ಒಳಪಡಿಸಲಾಗುವುದು. ಕೇಂದ್ರ ಕಚೇರಿಯಲ್ಲಿ ಒಟ್ಟಾರೆ 400ಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಮೂರು ದಿನಗಳಲ್ಲಿ ಬಹುತೇಕ ಎಲ್ಲರೂ ಪರೀಕ್ಷೆಗೊಳಪಟ್ಟಂತಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
 
ಕಚೇರಿಯಲ್ಲಿ ಸಿಬ್ಬಂದಿ ಒಂದೆಡೆ ಕಾರ್ಯನಿರ್ವಹಿಸುವುದರಿಂದ ಬಹುತೇಕ ಎಲ್ಲರೂ ಒಂದಿಲ್ಲೊಂದು ರೀತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರೇ ಆಗುತ್ತಾರೆ. ಹಾಗಂತ, ಎಲ್ಲರಿಗೂ ಮನೆಯಿಂದ ಕಾರ್ಯನಿರ್ವಹಿಸಲು ಸೂಚನೆ ನೀಡುವುದು ಕಷ್ಟ. ಯಾಕೆಂದರೆ, ಬಿಎಂಟಿಸಿಯಂತೆಯೇ "ನಮ್ಮ ಮೆಟ್ರೋ' ಕೂಡ ಅಗತ್ಯ ಸೇವೆಗಳಲ್ಲಿ ಬರುತ್ತದೆ. ಯೋಜನೆ, ವಿನ್ಯಾಸ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಎಂಜಿನಿಯರ್‌ಗಳ ಉಪಸ್ಥಿತಿ ಅಗತ್ಯವಾಗಿದೆ. ಆದ್ದರಿಂದ 60 ವರ್ಷ ಮೇಲ್ಪಟ್ಟ ಮತ್ತು 60 ವರ್ಷ ಮೇಲ್ಪಟ್ಟು ಮಧುಮೇಹ, ಹೃದ್ರೋಗದಂತಹ ಸಹ-ಅಸ್ವಸ್ಥತೆ ಇರುವ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments