Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಯುಕ್ರೇನ್ನಲ್ಲಿರುವ ಭಾರತೀಯರ ಸ್ಥಳಾಂತರ ಅಂತಿಮ ಹಂತಕ್ಕೆ ಬಂದಿದೆ.
ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿ ಬಾಂಬಿಂಗ್ ಇನ್ನೂ ನಡೀತಿದೆ. ದಾಳಿ ನಿಂತ ನಂತರ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ.
ಉಕ್ರೇನ್ನಲ್ಲಿ ಉಳಿದವರಿಗೂ ಬೇರೆ ಬೇರೆ ರೀತಿಯಲ್ಲಿ ಸಹಾಯ ಮಾಡಲು ಭಾರತ ಮುಂದಾಗಿದೆ ಎಂದು ತಿಳಿಸಿದರು.
ಮಾತನಾಡಿ, ವರಿಷ್ಠರು ಇನ್ನೂ ಸೂಚನೆ ಕೊಟ್ಟಿಲ್ಲ. ವರಿಷ್ಠರ ಸೂಚನೆ ಕೊಟ್ಟ ಮೇಲೆ ದೆಹಲಿಗೆ ಹೋಗುತ್ತೇನೆ. ವರಿಷ್ಠರು ಯಾವಾಗ ಹೇಳ್ತಾರೋ ಆಗ ಸಚಿವ ಸಂಪುಟ ಪುನಾರಚನೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.