Webdunia - Bharat's app for daily news and videos

Install App

ನೇಹಾಗೆ ಚಾಕು ಹಾಕಿದ್ದೇಕೆ? ಜೈಲು ಅಧಿಕಾರಿಗಳ ಮುಂದೆ ಭಯಾನಕ ಸತ್ಯ ಬಾಯ್ಬಿಟ್ಟ ಫಯಾಜ್

Krishnaveni K
ಭಾನುವಾರ, 21 ಏಪ್ರಿಲ್ 2024 (13:20 IST)
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಕೊಲೆ ಪ್ರಕರಣದ ಒಂದೊಂದೇ ಸತ್ಯಗಳು ಈಗ ಬೆಳಕಿಗೆ ಬರುತ್ತಿವೆ. ಇದೀಗ ಹಂತಕ ಫಯಾಜ್ ಜೈಲು ಅಧಿಕಾರಿಗಳ ಮುಂದೆ ತಾನು ಆಕೆಯನ್ನು ಹತ್ಯೆ ಮಾಡಿದ್ದೇಕೆ ಎಂದು ಬಾಯ್ಬಿಟ್ಟಿದ್ದಾನೆ.

ಘಟನೆ ನಡೆದ ಸ್ಥಳದಲ್ಲೇ ಫಯಾಜ್ ನನ್ನು ಹಿಡಿದು ಬಂಧಿಸಲಾಗಿತ್ತು. ಕೋರ್ಟ್ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಫಯಾಜ್ ಜೈಲು ಕಂಬಿ ಎಣಿಸುತ್ತಿದ್ದಾನೆ. ಈ ನಡುವೆ ಆತ ತಾನು ಆಕೆಯನ್ನು ಹತ್ಯೆ ಮಾಡಿದ್ದೇಕೆ ಎಂದು ಕಾರಣ ವಿವರಿಸಿದ್ದಾನೆ.

ಅವಳು ನನ್ನ ಜೊತೆ ಮಾತು ಬಿಟ್ಟಿದ್ದಕ್ಕೇ ಹೀಗೆ ಮಾಡಿದೆ ಎಂದಿದ್ದಾನೆ. ‘ನಾನು ಮೊದಲೇ ಕಾಲೇಜು ಬಿಟ್ಟಿದ್ದೆ. ಅವಳನ್ನು ಕೊಲೆ ಮಾಡುವ ಒಂದು ವಾರದ ಮೊದಲು ಮಾತನಾಡಲು ಪ್ರಯತ್ನಿಸಿದ್ದೆ. ಆಗ ಅವಳು ನನ್ನನ್ನು ಅವಾಯ್ಡ್ ಮಾಡಿದಳು. ಆವತ್ತು ಏಪ್ರಿಲ್ 18 ರಂದು ಅವಳು ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ನಾನು ಅಂದು ಮತ್ತೆ ಅವಳನ್ನು ಮಾತನಾಡಿಸಲು ಪ್ರಯತ್ನಿಸಿದೆ. ಪರೀಕ್ಷೆ ಮುಗಿಯುವವರೆಗೂ ಕಾದೆ. ಬಳಿಕ ಅವಳನ್ನು ಮಾತನಾಡಿಸಲು ಬಂದಾಗ ನನಗೆ ಮಾತನಾಡಲು ಇಷ್ಟವಿಲ್ಲ ಎಂದು ಹೊರಡಲು ನೋಡಿದಳು. ಆಗ ಅವಳಿಗೆ ಚಾಕು ಹಾಕಿದೆ. ಹತ್ತು ಬಾರಿ ಚುಚ್ಚಿದೆ. ಆಗ ನನ್ನ ಕೈಗೆ, ಕಾಲಿಗೂ ಗಾಯವಾಗಿತ್ತು. ಅವಳು ಮಾತನಾಡಲ್ಲ ಎಂದಿದ್ದಕ್ಕೆ ಚೂರಿ ಹಾಕಿದೆ’ ಎಂದಿದ್ದಾನೆ.

ನೇಹಾ ಕುಟುಂಬಸ್ಥರೂ ನಿನ್ನೆ ಫಯಾಜ್ ಬಹಳ ದಿನಗಳಿಂದ ಪ್ರೀತಿಸುವಂತೆ ಕಾಟ ಕೊಡುತ್ತಿದ್ದ. ಆದರೆ ನಾವು ಆತನಿಗೆ ಮದುವೆ ಮಾಡಿಕೊಡಲು ಒಪ್ಪಿರಲಿಲ್ಲ. ಈ ಬಗ್ಗೆ ಅವರ ಮನೆಯವರ ಮೂಲಕವೂ ಎಚ್ಚರಿಕೆ ನೀಡಿದ್ದೆವು ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments